ಜ.2 ರಂದು ಅಕ್ರಮ ಸಕ್ರಮ ಹಕ್ಕುಪತ್ರ ವಿತರಣೆ: ಶಾಸಕ ಅಶೋಕ್ ರೈ

0

ಪುತ್ತೂರು: ಜ.2ರಂದು ಅಕ್ರಮ ಸಕ್ರಮ ಹಕ್ಕು ಪತ್ರ ವಿತರಣೆ ನಡೆಯಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.
ಅಕ್ರಮ ಸಕ್ರಮ ಸದಸ್ಯರ ಸಭೆಯಲ್ಲಿ ಮಾಹಿತಿ ನೀಡಿದ ಶಾಸಕರು ಶಾಸಕರ ಕಚೇರಿ‌ ಮುಂಭಾಗದಲ್ಲಿ ಬೆ.10ರಿಂದ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಅಕ್ರಮ ಸಕ್ರಮ ಮತ್ತು 94 ಸಿ, 94 ಸಿಸಿ ಹಕ್ಕು ಪತ್ರಗಳ ವಿತರಣೆ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಮತ್ತು ಉಪ್ಪಿನಂಗಡಿ ಹೋಬಳಿಯ ಫಲಾನುಭವಿಗಳು ಭಾಗವಹಿಸುವಂತೆ ಶಾಸಕರು ತಿಳಿಸಿದ್ದು ಸುಮಾರು 600 ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ನಡೆಯಲಿದೆ.‌ ಶಾಸಕರು ಈಗಾಗಲೇ ಈ ಸಂಬಂದ ತಹಶೀಲ್ದಾರ್ ಅವರಿಗೆ ಸೂಚನೆಯನ್ನು ನೀಡಿದ್ದು ಕಡತಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥ ಮಾಡಿಡುವಂತೆ ಶಾಸಕರು ಸೂಚನೆಯನ್ನು ನೀಡಿದ್ದಾರೆ.
ಸಭೆಯಲ್ಲಿ ಅಕ್ರಮ ಸಕ್ರಮ ಸಮಿತಿ ಸದಸ್ಯರುಗಳಾದ ಮಹಮ್ಮದ್ ಬಡಗನ್ನೂರು, ರಾಮಣ್ಣ ಪಿಲಿಂಜ ಮತ್ತು ರೂಪರೇಖಾ ಆಳ್ವ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here