ಶಾಖೆಪುರ: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ

0

ಹಿರೆಬಂಡಾಡಿ: ಕೊಯಿಲ-ಹಿರೆಬಂಡಾಡಿ ಶಾಖೆಪುರ ಸಂಜೀವಿನಿ ಮಿತ್ರವೃಂದದ ಆಶ್ರಯದಲ್ಲಿ ೫ನೇ ವರ್ಷದ ಕಥಾಸಹಿತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಡಿ.24ರಂದು ಶಾಖೆಪುರ ಮೈದಾನದಲ್ಲಿ ನಡೆಯಿತು.

ಬೆಳಿಗ್ಗೆ ಗಣಹೋಮ ನಡೆಯಿತು. ಅಪರಾಹ್ನ ಕಶೆಕೋಡಿ ಸೂರ್ಯನಾರಾಯಣ ಭಟ್‌ರವರ ನೇತೃತ್ವದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ ನಡೆದು, ಪ್ರಸಾದ ವಿತರಣೆ ನಡೆಯಿತು. ನಂತರ ಸಂಜೀವಿನಿ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ದೈವ ನರ್ತಕ, ದ.ಕ.ಜಿಲ್ಲಾ ಪ್ರಶಸ್ತಿ ಪುರಸ್ಕೃತ ಡಾ.ರವೀಶ ಪಡುಮಲೆ ಧಾರ್ಮಿಕ ಉಪನ್ಯಾಸ ನೀಡಿದರು. ಶಾಖೆಪುರ ಸಂಜೀವಿನಿ ಮಿತ್ರವೃಂದದ ಸದಸ್ಯ ದಯಾನಂದ ಸರೋಳಿ ಅಧ್ಯಕ್ಷತೆ ವಹಿಸಿದ್ದರು.

ದೈವದ ಮಧ್ಯಸ್ಥರಾದ ವಿನೋದ್ ಬೋಂಟ್ರಪಾಲ್, ಸಮಾಜ ಸೇವಕ ರಮಾನಂದ ಪೆರಾಬೆ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.


ದೈಹಿಕ ಶಿಕ್ಷಣ ಶಿಕ್ಷಕ ಅಶೋಕ ಮಾಳ ಸ್ವಾಗತಿಸಿ, ಸೋಮೇಶ ಕೇಪುಳು ವಂದಿಸಿದರು. ಉಪನ್ಯಾಸಕ ಚೇತನ್ ಆನೆಗುಂಡಿ ನಿರೂಪಿಸಿದರು. ಧಾರ್ಮಿಕ ಸಭೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ನಂತರ ಅಭಿನಯ ಕಲಾವಿದರು ಉಡುಪಿ ಇವರಿಂದ ಕುತೂಹಲಭರಿತ ಹಾಸ್ಯಮಯ ನಾಟಕ’ಶಾಂಭವಿ’ಪ್ರದರ್ಶನಗೊಂಡಿತು. ಸಂಜೀವಿನಿ ಮಿತ್ರವೃಂದದ ಪದಾಧಿಕಾರಿಗಳು, ಸದಸ್ಯರು ವಿವಿಧ ಕಾರ್ಯಕ್ರಮಗಳಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here