ನಿಡ್ಪಳ್ಳಿ: ಅಯೋಧ್ಯೆಯ ಮಂತ್ರಾಕ್ಷತೆ ಮನೆ ಮನೆಗೆ ವಿತರಣೆಗೆ ಚಾಲನೆ

0

ನಿಡ್ಪಳ್ಳಿ: ಅಯೋಧ್ಯೆ ಶ್ರೀ ರಾಮ ಜನ್ಮಭೂಮಿಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ಇಂದಿನಿಂದ ಗ್ರಾಮದ ಪ್ರತಿ ಹಿಂದು ಮನೆ ಮನೆಗೆ ವಿತರಿಸುವ ಕಾರ್ಯಕ್ರಮಕ್ಕೆ ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ಜ.1ರಂದು ಚಾಲನೆ ನೀಡಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕ ವೇದ ಮೂರ್ತಿ ನವೀನ್ ಹೆಬ್ಬಾರ್ ಅಕ್ಷತೆಯನ್ನು ಕಾರ್ಯಕರ್ತರಿಗೆ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗ್ರಾಮದ ಮೂರು ವಾರ್ಡುಗಳ ಮನೆ ಮನೆಗೆ ಹಂಚಲು ಕಾರ್ಯಕರ್ತರ ತಂಡ ರಚಿಸಿ ವ್ಯವಸ್ಥಿತವಾದ ರೀತಿಯಲ್ಲಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ, ಉಪಾಧ್ಯಕ್ಷ ಪದ್ಮನಾಭ ಬೋರ್ಕರ್, ಸದಸ್ಯರಾದ ನಾಗೇಶ ಗೌಡ, ರಾಮಚಂದ್ರ ಮಣಿಯಾಣಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here