ಕರ್ನಾಟಕ ಕ್ರೈಸ್ತ ರಕ್ಷಣಾ ವೇದಿಕೆಯ ಸಂಸ್ಥಾಪಕ, ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋರವರಿಗೆ ದುಷ್ಕರ್ಮಿಗಳಿಂದ ಹಲ್ಲೆ- ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶದಿಂದ ಖಂಡನೆ

0

ಪುತ್ತೂರು: ಬೀದರ್ ಜಿಲ್ಲೆಯ ಅಮನಾಬಾದ್ ಎಂಬಲ್ಲಿ ಕರ್ನಾಟಕ ಕ್ರೈಸ್ತ ರಕ್ಷಣಾ ವೇದಿಕೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋರವರಿಗೆ ಕೆಲ ದುಷ್ಕರ್ಮಿಗಳು ಹಲ್ಲೆಯನ್ನು ನಡೆಸಿರುತ್ತಾರೆ.
ಕ್ರೈಸ್ತ ಧರ್ಮದ ಪರ ಸದಾ ಧ್ವನಿಯಾಗಿರುತ್ತಿದ್ದ ಸ್ಟ್ಯಾನಿ ಪಿಂಟೋರವರು ಬೀದರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗಿದ ಸಂದರ್ಭದಲ್ಲಿ ಕೆಲ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆಯನ್ನು ನಡೆಸಿರುತ್ತಾರೆ. ಸ್ಟ್ಯಾನಿ ಪಿಂಟೊ ಅವರ ಮೇಲಿನ ಈ ಹಲ್ಲೆಯನ್ನು ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ಅಧ್ಯಕ್ಷ ಆಲ್ವಿನ್ ಡಿ’ಸೋಜ ಹಾಗೂ ಪುತ್ತೂರು ಮಾಯಿದೆ ದೇವುಸ್ ಚರ್ಚ್ ವ್ಯಾಪ್ತಿಯ ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಅರುಣ್ ಪಿಂಟೋರವರು ತೀವೃವಾಗಿ ಖಂಡಿಸಿದ್ದಾರೆ. ಈ ಕೃತ್ಯವನ್ನು ಕೂಲಂಕುಷವಾಗಿ ತನಿಖೆ ಮಾಡಿ, ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಬೇಕೆಂದು ಹಾಗೂ ಸ್ಟ್ಯಾನಿ ಪಿಂಟೋರವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ರಕ್ಷಣೆ ನೀಡಬೇಕೆಂದು ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ಅಧ್ಯಕ್ಷರಾದ ಆಲ್ವಿನ್ ಡಿ’ಸೋಜ ಹಾಗೂ ಪುತ್ತೂರು ಮಾಯಿದೆ ದೇವುಸ್ ಚರ್ಚ್ ವ್ಯಾಪ್ತಿಯ ಕಥೋಲಿಕ್ ಸಭಾದ ಅಧ್ಯಕ್ಷ ಅರುಣ್ ಪಿಂಟೋರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here