ಬಂಬಿಲ ಶ್ರೀ ಮಹಾಮಯಿ ದೇವಾಲಯದ ಜೀರ್ಣೋದ್ಧಾರ ಸಮಿತಿ ಸಭೆ

0

ಪುತ್ತೂರು : ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪಾಲ್ತಾಡಿ ಗ್ರಾಮದ ಬಂಬಿಲ ಶ್ರೀ ಮಹಾಮಾಯಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸಭೆಯು ದೇವಾಲಯದಲ್ಲಿ ವಠಾರದಲ್ಲಿ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿ ದೇವಾಲಯದ ಅಭಿವೃದ್ಧಿ ಕಾರ್ಯದಲ್ಲಿ ಎಲ್ಲರ ಸಹಕಾರ ಕೋರಿದರು. ಜೀರ್ಣೋದ್ಧಾರ ಸಮಿತಿ ಕಾರ್ಯಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಸಂಚಾಲಕ ಗಿರಿಶಂಕರ್ ಸುಲಾಯ ದೇವಸ್ಯ, ಪದಾಧಿಕಾರಿಗಳಾದ ರಾಕೇಶ್ ರೈ ಕೆಡೆಂಜಿ, ಇಂದಿರಾ ಬಿ.ಕೆ, ತಾರಾನಾಥ ಕಾಯರ್ಗ, ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ , ಉಮಾಪ್ರಸಾದ್ ರೈ ನಡುಬೈಲು, ಪದಾಧಿಕಾರಿಗಳಾದ ಸುಂದರ ಬಂಬಿಲ, ಬಲ್ಲು, ರವಿ ಬಂಬಿಲ, ಗುರುರಾಜ್ ಭಾಗವಹಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕುಶಾಲಪ್ಪ ಬಂಬಿಲ ಸ್ವಾಗತಿಸಿ, ಶಶಿಕುಮಾರ್, ಕೃಷ್ಣಪ್ಪ ಬಂಬಿಲ, ಬಾಬು ಬಂಬಿಲರವರುಗಳು ಸಹಕರಿಸಿದರು.

LEAVE A REPLY

Please enter your comment!
Please enter your name here