ಮಿಶನ್‌ಮೂಲೆ-ಮೊಟ್ಟೆತ್ತಡ್ಕ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಮಹಾ ಚಂಡಿಕಾಯಾಗ

0

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮಿಶನ್‌ಮೂಲೆ-ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಮಹಾ ಚಂಡಿಕಾಯಾಗವು ಜ.3ರಂದು ಜರಗಿತು.


ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗ ಪ್ರಾರಂಭ, ಕಲಶ ಪೂಜೆ, ಪೂರ್ವಾಹ್ನ ಚಂಡಿಕಾಯಾಗದ ಪೂರ್ಣಾಹುತಿ, ನಾಗದೇವರಲ್ಲಿ ತಂಬಿಲ ಸೇವೆ, ದೈವಗಳಿಗೆ ತಂಬಿಲ, ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂರ್ಪಣೆ ನಡೆಯಲಿದೆ. ಅದೇ ದಿನ ರವಿವಾರ ಬೆಳಿಗ್ಗೆ ಸೂರ್ಯೋದಯದಿಂದ ಸಂಜೆ ಸೂರ್ಯಾಸ್ತದವರೆಗೆ ಅರ್ಧ ಏಕಾಹ ಭಜನೆ ಹಾಗೂ ಸಂಜೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ನೆರವೇರಿತು.


ಭಜನಾ ಸೇವೆ:
ಕೆಮ್ಮಿಂಜೆ ಶ್ರೀರಾಮ ಮಹಿಳಾ ಭಜನಾ ಮಂಡಳಿ, ಪಾಲಿಂಜೆ ಶ್ರೀ ವಿಷ್ಣುಮೂರ್ತಿ ಮಹಿಳಾ ಭಜನಾ ಮಂಡಳಿ, ಆಲಡ್ಕ ಸದಾಶಿವ ಭಜನಾ ಮಂಡಳಿ, ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂಡಳಿ, ಬಲ್ನಾಡು ಶ್ರೀ ಭಟ್ಟಿ ವಿನಾಯಕ ಭಜನಾ ಮಂಡಳಿ, ನರಿಮೊಗರು ಸೇರಾಜೆ ಶ್ರೀ ಶಾರದಾಂಬ ಭಜನಾ ಮಂಡಳಿ, ಕೊಂಬೆಟ್ಟು ಮರಾಠಿ ಮಹಿಳಾ ವೇದಿಕೆ, ಕುರಿಯ ಉಳ್ಳಾಲ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ, ಶ್ರೀ ವಜ್ರಮಾತಾ ಭಜನಾ ಮಂಡಳಿ, ಮುಕ್ರಂಪಾಡಿ ಶ್ರೀ ಸುಭದ್ರ ಮಹಿಳಾ ಭಜನಾ ಮಂಡಳಿ, ಸರ್ವೆ ಕಲ್ಪನೆ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ, ಭಕ್ತಕೋಡಿ ಶ್ರೀರಾಮ ಭಜನಾ ಮಂಡಳಿ ಸದಸ್ಯರಿಂದ ಭಜನಾ ಸೇವೆ ನಡೆಯಿತು.

ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ರಮೇಶ್ ರೈ ಮಿಶನ್ ಮೂಲೆ, ಸತೀಶ್ ರೈ ಮಿಶನ್ ಮೂಲೆ, ಆಡಳಿತ ಮಂಡಳಿ ಅಧ್ಯಕ್ಷ ರಾಮ ಶೆಟ್ಟಿ, ಕಾರ್ಯದರ್ಶಿ ಕೆ.ಬಿ ಶೇಖರ್, ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಕೆ ಹಾಗೂ ಸತೀಶ್ ಎಂ, ಜೊತೆ ಕಾರ್ಯದರ್ಶಿಗಳಾದ ಲಕ್ಷ್ಮಣ ಶೆಟ್ಟಿ, ಸಂತೋಷ್ ರೈ, ಸುಂದರ ಕೆ, ಕೋಶಾಧಿಕಾರಿ ಮೋಹನ್ ಕುಮಾರ್ ಡಿ, ಲೆಕ್ಕಪರಿಶೋಧಕ ಬಿ.ವಿಶ್ವನಾಥ್ ರೈ ಸಹಿತ ನೂರಾರು ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here