ಕಡಬ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ-ನಾಡದೋಣಿ ವಶ

0

ಕಡಬ: ತಾಲೂಕಿನ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀದಿಗುಡ್ಡೆ ಸಮೀಪ ಕುಮಾರಧಾರಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ, ಕಂದಾಯ ಹಾಗೂ ಪೊಲೀಸ್ ಇಲಾಖೆ ದಾಳಿ ನಡೆಸಿ ಎರಡು ನಾಡದೋಣಿ ವಶಪಡಿಸಿಕೊಂಡಿರುವ ಘಟನೆ ಜ.5ರಂದು ಮಧ್ಯಾಹ್ನ ನಡೆದಿದೆ.
ಬೀದಿಗುಡ್ಡೆ ಸಮೀಪ ಕುಮಾರಧಾರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಪೊಲೀಸ್ ಹಾಗೂ ಕಂದಾಯ ಇಲಾಖೆಯವರ ಸಹಕಾರದೊಂದಿಗೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಮರಳುಗಾರಿಕೆಗೆ ಬಳಕೆ ಮಾಡುತ್ತಿದ್ದ ಎರಡು ನಾಡ ದೋಣಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವಸುದಾ, ಕಡಬ ಎಸ್‌ಐ ಅಭಿನಂದನ್, ಗ್ರಾಮಕರಣಿಕ ಸಿರಾಜ್ ಅವರ ನೇತೃತ್ವದಲ್ಲಿ ದಾಳಿ ನಡೆದಿತ್ತು.

LEAVE A REPLY

Please enter your comment!
Please enter your name here