ಸರ್ವೆ ಕಲ್ಪಣೆ: ಅಗಲಿದ ಸಹಪಾಠಿಗೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹೃದಯಸ್ಪರ್ಷಿ ನುಡಿನಮನ ಸಲ್ಲಿಸಿದ ವಿದ್ಯಾರ್ಥಿಗಳು

0

ಪುತ್ತೂರು: ಇತ್ತೀಚೆಗೆ ನಿಧನರಾದ ತಮ್ಮ ಸಹಪಾಠಿಗೆ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳು ವಿಭಿನ್ನವಾಗಿ ನುಡಿ ನಮನ ಸಲ್ಲಿಸಿದ್ದಾರೆ. ಆ ಮೂಲಕ ತಮ್ಮ ಸಹಪಾಠಿ ಮರೆಯಾದರೂ ಆತನ ನೆನಪು ಶಾಶ್ವತ ಎನ್ನುವ ಸಂದೇಶವನ್ನು ನೀಡುವ ಮೂಲಕ ವಿದ್ಯಾರ್ಥಿಗಳು ಮೆಚ್ಚುಗೆಗೂ ಪಾತ್ರವಾಗಿದ್ದಾರೆ.

ಸರ್ವೆ ಕಲ್ಪಣೆ ಸರಕಾರಿ ಹಿ.ಪ್ರಾ.ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸುಪ್ರೀತ್ ಅವರು ನ.1ರಂದು ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿ ನಿಧನರಾಗಿದ್ದರು. ತನ್ನ ಸಹಪಾಠಿಯ ನೆನಪಿಗಾಗಿ ಶಾಲಾ ವಾರ್ಷಿಕೋತ್ಸವ ಸಮಾರಂಭದ ವೇದಿಕೆಯಲ್ಲಿ ಸುಪ್ರೀತ್ ಅವರ ಭಾವಚಿತ್ರ ಹಾಗೂ ಕ್ಯಾಂಡಲ್ ಹಿಡಿದು ವಿದ್ಯಾರ್ಥಿಗಳು ಹೃದಯಸ್ಪರ್ಷಿಯಾಗಿ ನುಡಿನಮನ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here