ಕೌಕ್ರಾಡಿ: ಸಂಜೀವಿನಿ ಒಕ್ಕೂಟದ ಹಾಳೆತಟ್ಟೆ ಘಟಕ ಉದ್ಘಾಟನೆ

0

ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯತ್‌ನ ಮಿಲನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಡಿ ಮೌಲ್ಯ ಸರಪಳಿ ಅಭಿವೃದ್ಧಿ ಮತ್ತು ಮಾರುಕಟ್ಟೆ ಜೋಡಣೆ ವಿಭಾಗ ನಿಸರ್ಗ ರೈತ ಉತ್ಪಾದಕರ ಸಂಘದ ಸದಸ್ಯರು ನಡೆಸುವ ಹಾಳೆತಟ್ಟೆ ಘಟಕದ ಉದ್ಘಾಟನಾ ಕಾರ್ಯಕ್ರಮ ಜ.5ರಂದು ನಡೆಯಿತು.


ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷರಾದ ಲೋಕೇಶ್ ಬಾಣಜಾಲು ಉದ್ಘಾಟಿಸಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಜಗತ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಯಶವಂತ, ಕಾರ್ಯದರ್ಶಿ ದೇವಿಕಾ ಶುಭಹಾರೈಸಿದರು. ಒಕ್ಕೂಟದ ಉಪಾಧ್ಯಕ್ಷೆ ವಿದ್ಯಾ, ರೈತ ಉತ್ಪಾದಕ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಎಂಬಿಕೆ, ಎಲ್‌ಸಿಆರ್‌ಪಿ, ಜನಸಖಿ, ಕೃಷಿ ಸಖಿ, ಪಶುಸಖಿ, ಕೃಷಿ ಉದ್ಯೋಗಸಖಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು. ಸುವರ್ಣಲತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಮಿತ್ರಾ ವಂದಿಸಿದರು.

LEAVE A REPLY

Please enter your comment!
Please enter your name here