ಕುರಿಯ ಉಳ್ಳಾಲ ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ

0

ಪುತ್ತೂರು: ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ 15ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರೀ ವಿಷ್ಣುಸೇವಾ ಸಮಿತಿ ಕುರಿಯ ಇದರ ಸಹಕಾರದೊಂದಿಗೆ ಜ.5ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ರಾತ್ರಿ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಉದಯಗಿರಿ ಮುಂಡೂರು ಇವರಿಂದ ಭಜನೆ, ಬಳಿಕ ಸಾರ್ವಜನಿಕ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶಾರದಾ ಆರ್ಟ್ಸ್ ಮಂಜೇಶ್ವರ ಪ್ರಸ್ತುತ ಪಡಿಸುವ ತುಳು ಹಾಸ್ಯಮಯ ನಾಟಕ “ಕಥೆ ಎಡ್ಡೆಂಡು” ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಪ್ರಧಾನ ಅರ್ಚಕರು, ಅರ್ಚಕ ವೃಂದದವರು, ಗೌರವ ಸಲಹೆಗಾರರು ಹಾಗೂ ಊರಿನ ಹತ್ತು ಸಮಸ್ತರು, ಶ್ರೀ ವಿಷ್ಣು ಸೇವಾ ಸಮಿತಿಯ ಗೌರವಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here