ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಫೆ. 24ರಿಂದ ಫೆ.26ರ ವರೆಗೆ ಜಾತ್ರೋತ್ಸವ – ರಥೋತ್ಸವ – ಬೆಡಿ ಉತ್ಸವ

ವಿಟ್ಲ: ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಶ್ರೀಕೃಷ್ಣ ಗುರೂಜಿರವರು ಶ್ರೀ ದೇವಿಯ ಮುಂಭಾಗದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಬಿಡುಗಡೆ ಮಾಡಿದರು. ಬಳಿಕ ಗುರೂಜಿರವರು ಮಾತನಾಡಿ ಪೆ. 24ರಿಂದ 26ರ ವರೆಗೆ ಮೂರು ದಿನಗಳ ಕಾಲ ಜಾತ್ರೋತ್ಸವ ನಡೆಯಲಿದ್ದು, ಭಕ್ತಾಧಿಗಳೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿಸಿದರು.


ಈ ಸಂಧರ್ಭದಲ್ಲಿ ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಧರ್ ಬಾಳೆಕಲ್ಲು ,ಕಾಳಿಕಾ ಕಲಾ ಸಂಘದ ಅಧ್ಯಕ್ಷರಾದ ಸಂಜೀವ ಪಳನೀರು, ಪ್ರಮುಖರಾದ ಸಂಕಪ್ಪ ಸುವರ್ಣ ಬಾಡೂರು, ವಾಸಪ್ಪ ಹಿರೆಬಂಡಾಡಿ, ನವೀನ ತಾರಿದಳ, ಕೃಷ್ಣಪ್ಪ ತಾರಿದಳ, ರವಿ ಕುಟ್ಯಮಡ್ಕ, ಮೊದಲಾದವರು ಉಪಸ್ಥಿತಿತರಿದ್ದರು, ಸತ್ಯ ಪ್ರಸಾದ್ ಕುಕ್ಕಾಜೆ ಸ್ವಾಗತಿಸಿ ನಾಗೇಶ್ ಕುಟೇಲು ವಂದಿಸಿದರು.

LEAVE A REPLY

Please enter your comment!
Please enter your name here