ನಾಳೆ(ಜ.9): ಅಂತರ್ರಾಷ್ಟ್ರೀಯ ಖ್ಯಾತಿಯ ಪ್ರಭಾಷಣಗಾರ ಅಹ್ಮದ್ ಕಬೀರ್ ಬಾಖವಿ ಸವಣೂರಿಗೆ

0

ಪುತ್ತೂರು: ಬದ್ರಿಯಾ ಜುಮಾ ಮಸ್ಜಿದ್ ಚಾಪಳ್ಳ, ಸವಣೂರು ಇದರ ಅಧೀನ ಸಂಸ್ಥೆಯಾಗಿರುವ ಅಲ್ ನೂರ್ ಮುಸ್ಲಿಂ ಯೂತ್ ಫೆಡರೇಶನ್ ಚಾಪಳ್ಳ ಇದರ ಬೆಳ್ಳಿ ಹಬ್ಬದ ಅಂಗವಾಗಿ ಬಡ ಯತೀಂ ಹೆಣ್ಮಕ್ಕಳ ಮದುವೆ ಸಹಾಯಾರ್ಥ ಏಕದಿನ ಧಾರ್ಮಿಕ ಮತ ಪ್ರಭಾಷಣ ಜ.9ರಂದು ಸಂಜೆ ಗಂಟೆ 7ಕ್ಕೆ ಚಾಪಳ್ಳ ಮಸೀದಿ ವಠಾರದಲ್ಲಿ ನಡೆಯಲಿದೆ.

ಚಾಪಳ್ಳ ಮಸೀದಿಯ ಗೌರವಾಧ್ಯಕ್ಷರಾದ ಅಸ್ಸಯ್ಯದ್ ಹಾಮಿದುಲ್ ಹಾದೀ ತಂಙಳ್ ಮಂಜೇಶ್ವರ ದುವಾ ನೆರವೇರಿಸಲಿದ್ದು ಸ್ಥಳೀಯ ಖತೀಬ್ ಮುಹಮ್ಮದ್ ಅಶ್ರಫ್ ಫಾಝಿಲ್ ಬಾಖವಿ ಪ್ರಾಸ್ತಾವಿಕ ಭಾಷಣ ನಡೆಸಲಿದ್ದಾರೆ. ಅಂತರ್ರಾಷ್ಟ್ರೀಯ ಖ್ಯಾತಿಯ ಪ್ರಭಾಷಣಗಾರ ಅಹ್ಮದ್ ಕಬೀರ್ ಬಾಖವಿ ಅವರು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಹಲವಾರು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here