ಕರ್ನಾಟಕ ಅಂಚೆ ಇಲಾಖೆಯಿಂದ ಕರ್ನಾಪೆಕ್ಸ್‌–2024 ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ತನಯ ದ್ವಿತೀಯ

0

ಪುತ್ತೂರು: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಜ.5 ರಿಂದ 8 ರವರೆಗೆ ಅಂಚೆ ಇಲಾಖೆ ನಡೆಸಿದ 13ನೇ ರಾಜ್ಯಮಟ್ಟದ ಕರ್ನಾಪೆಕ್ಸ್‌–2024 ರ ಚಿತ್ರಕಲಾ ಸ್ಪರ್ಧೆಯಲ್ಲಿ 2ನೇ ತರಗತಿ ವಿಭಾಗದಲ್ಲಿ ತನಯರವರು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಜ.7 ರಂದು ಬೆಂಗಳೂರಿನಲ್ಲಿ ಅಂಚೆ ಇಲಾಖೆಯು ಗಣ್ಯರ ಉಪಸ್ಥಿತಿಯಲ್ಲಿ ಬಹುಮಾನವನ್ನು ನೀಡಿ ಗೌರವಿಸಿಸಿದರು.


ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಆಗಿರುವ ಈಕೆ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಪ್ರಫುಲ್ಲ ಹಾಗೂ ಗಣೇಶ್ ಅವರ ಸುಪುತ್ರಿ ಆಗಿರುತ್ತಾರೆ. ಈಕೆ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಆರ್ಟ್ ಆ್ಯಂಡ್ ಕ್ರಾಫ್ಟ್ ತರಬೇತುದಾರರಿಂದ ತರಬೇತಿಯನ್ನು ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here