ಪಾಣಾಜೆ ಶಾಲೆಯಲ್ಲಿ ವಾರ್ಷಿಕೋತ್ಸವ- ಡಾ. ಹಾಜಿ.ಯಸ್. ಅಬೂಬಕರ್ ಆರ್ಲಪದವುರವರಿಗೆ ಸನ್ಮಾನ

0

ಪುತ್ತೂರು:ಪಾಣಾಜೆ ಶಾಲೆಯಲ್ಲಿ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಸುಮಾರು 20 ವರ್ಷಗಳ ಕಾಲ ಶಾಲಾಭಿವೃದ್ಧಿ ಸಮಿತಿಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಕಳೆದ ಆರು ವರ್ಷಗಳ ಕಾಲ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಪ್ರಸ್ತುತ ಉಪಾಧ್ಯಕ್ಷರಾಗಿ ಶಾಲೆಯ ಅಭಿವೃದ್ಧಿಯಲ್ಲಿ ತನ್ನನ್ನು ತೊಡಗಿಸಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ ಡಾ ಹಾಜಿ ಎಸ್ ಅಬೂಬಕರ್ ಆರ್ಲಪದವು ಇವರ ಸೇವೆಯನ್ನು ಗುರುತಿಸಿ ಶಾಲಾ ವತಿಯಿಂದ ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೈಮುನತುಲ್ ಮೆಹರಾ ವಹಿಸಿದ್ದರು. ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರುಗಳಾದ ಭಾರತಿ ಭಟ್, ವಿಮಲಾ, ಸುಭಾಶ್ ರೈ ಚಂಬರಕಟ್ಟ , ಸುಲೋಚನ ,ನಾರಾಯಣ ನಾಯಕ್, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಸೀತಾ ಭಟ್, ಪ್ರಭಾರ ಮುಖ್ಯ ಗುರು ಸೀತಾರಾಮ ಭಟ್ ,ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ ರೈ ಗಿಳಿಯಾಲು, ಅಧ್ಯಾಪಕ ಮಾಂಕು ಮೂಲ್ಯ ವೆಂಕಟೇಶ್, ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here