ಆತೂರು: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ-ಗಾಯ

0

ರಾಮಕುಂಜ: ರಸ್ತೆ ಬದಿ ನಿಂತುಕೊಂಡಿದ್ದ ವ್ಯಕ್ತಿಯೋರ್ವರಿಗೆ ಬೈಕ್ ಡಿಕ್ಕಿಯಾದ ಘಟನೆ ಜ.7ರಂದು ಮಧ್ಯಾಹ್ನ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರು ಜಂಕ್ಷನ್‌ನಲ್ಲಿ ನಡೆದಿದೆ.


ಘಟನೆಯಲ್ಲಿ ಗಾಯಗೊಂಡಿರುವ ಕೊಯಿಲ ನಿವಾಸಿ ನಕ್ಕುರ ಅವರು ಪುತ್ತೂರು ಪ್ರಗತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಕ್ಕುರ ಅವರು ಪತ್ನಿ ಹಾಗೂ ಮಗಳೊಂದಿಗೆ ಜ.7ರಂದು ಮಧ್ಯಾಹ್ನ ಆತೂರು ಜಂಕ್ಷನ್‌ನಲ್ಲಿ ರಸ್ತೆ ಬದಿ ನಿಂತುಕೊಂಡಿದ್ದ ವೇಳೆ ಕುಂಡಾಜೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಚರಣ್ ಎಂಬವರು ಸವಾರನಾಗಿ, ಮಿಥುನ್ ಎಂಬವರನ್ನು ಸಹಸವಾರನಾಗಿ ಬರುತ್ತಿದ್ದ ಬೈಕ್ (ಕೆಎ21, ಯು 9844) ಡಿಕ್ಕಿಯಾಗಿದೆ. ಘಟನೆಯಲ್ಲಿ ನಕ್ಕುರ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಸ್ಥಳದಲ್ಲಿದ್ದವರು ಆಂಬುಲೆನ್ಸ್‌ನಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಬಗ್ಗೆ ನಕ್ಕುರ ಪುತ್ರಿ ಗೀತಾ ಅವರು ನೀಡಿದ ದೂರಿನಂತೆ ಕಡಬ ಪೊಲೀಸು ಠಾಣೆಯಲ್ಲಿ ಅ.ಕ್ರ: 03/2024 ಕಲಂ:279.337 ಐ.ಪಿ.ಸಿಯಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here