ರಾಮಕುಂಜೇಶ್ವರ ಕಿಂಡರ್‌ಗಾರ್ಟನ್‌ನಲ್ಲಿ ಗ್ರಾಂಡ್ ಪೇರೆಂಟ್ಸ್ ಡೇ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕಿಂಡರ್‌ಗಾರ್ಟನ್‌ನಲ್ಲಿ ಗ್ರಾಂಡ್ ಪೇರೆಂಟ್ಸ್ ಡೇ ಆಚರಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಉದ್ಘಾಟಿಸಿ ಮಾತನಾಡಿ, ಹಿರಿಯರ ಮಾರ್ಗದರ್ಶನ ಕಿರಿಯರಿಗೆ ಅತೀ ಮುಖ್ಯವಾಗಿದೆ. ಅಜ್ಜಂದಿರು ತಮ್ಮ ಮೊಮ್ಮಕ್ಕಳೊಂದಿಗೆ ಬೆರೆತು ಅವರಿಗೆ ಸದಾ ಮಾರ್ಗದರ್ಶನ ನೀಡುತ್ತಿರಬೇಕು. ಅವರಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಬೇಕು ಎಂದರು. ನಾಗಪ್ಪ ಗೌಡ, ಸೇಸಮ್ಮ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಕೇಂದ್ರ ಬಿಂದುಗಳಾಗಿದ್ದ ಕಿಂಡರ್‌ಗಾರ್ಟನ್‌ನ ಪುಟಾಣಿಗಳ ಅಜ್ಜ ಅಜ್ಜಿಯಂದಿರುವ ವಿವಿಧ ಸ್ಪರ್ಧೆಗಳಲ್ಲಿ ಮೊಮ್ಮಕ್ಕಳೊಂದಿಗೆ ಅತೀ ಉತ್ಸಾಹದಿಂದ ಪಾಲ್ಗೊಂಡರು. ಸಂಸ್ಥೆಯ ಅಡಳಿತಾಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಲೋಹಿತ, ಪ್ರೌಢಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಯು.ಎನ್., ಸಂಸ್ಥೆಯ ಶಿಕ್ಷಕರು, ಸಿಬ್ಬಂದಿಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here