ಕಂಬಳಬೆಟ್ಟು: ನಿಯಂತ್ರಣ ಕಳೆದುಕೊಂಡು ತರಕಾರಿ ಅಂಗಡಿಗೆ ನುಗ್ಗಿದ ಕಾರು

0

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ತರಕಾರಿ ಅಂಗಡಿಗೆ ನುಗ್ಗಿದ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ದರ್ಗಾದ ಬಳಿ ನಡೆದಿದೆ.

ಸುಳ್ಯ ಮೂಲದ ವ್ಯಕ್ತಿಯೋರ್ವರು ಚಲಾಯಿಸುತ್ತಿದ್ದ ಕಾರು ಕಂಬಳಬೆಟ್ಟು ದರ್ಗಾದ ಬಳಿ ತಲುಪುತ್ತಿದ್ದಂತೆ‌ ಚಾಲಕನ ನಿಯಂತ್ರಣ ಕಳೆದುಕೊಂಡು ತರಕಾರಿ ಅಂಗಡಿಗೆ ನುಗ್ಗಿದೆ ಎನ್ನಲಾಗಿದೆ. ಘಟನೆಯಿಂದಾಗಿ ತರಕಾರಿ ಅಂಗಡಿ ಹಾಗೂ ಅಲ್ಲೇ ನಿಲ್ಲಿಸಲಾಗಿದ್ದ ಅಂಗಡಿ ಮಾಲಕರ ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ. ಘಟನೆಯಿಂದಾಗಿ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಮಾಹಿತಿ ಲಭಿಸಿದೆ.

LEAVE A REPLY

Please enter your comment!
Please enter your name here