ವಿಟ್ಲ: ಮರಳು ಸಾಗಾಟ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ವಿಟ್ಲ: ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ನರಿಂಗಾನ ನಿವಾಸಿ ಸಿದ್ದಿಕ್ ಕೆ.ಎಂ.(46 ವ.) ಬಂಽತ ಆರೋಪಿ. ಮರಳು ಸಾಗಾಟಕ್ಕೆ ಸಂಬಂಽಸಿದಂತೆ ಸಿದ್ದಿಕ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ವಿಚಾರಣೆ ವೇಳೆ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆತನ ಪತ್ತೆಗಾಗಿ ನ್ಯಾಯಾಲಯವು ವಾರಂಟ್ ಜಾರಿ ಮಾಡಿತ್ತು. ಆರೋಪಿ ಬಗ್ಗೆ ಮಾಹಿತಿ ಸಂಗ್ರಹಿಸಿದ ವಿಟ್ಲ ಪೊಲೀಸ್ ಠಾಣಾ ಎ.ಎಸ್.ಐ. ಜಯರಾಮ ಹಾಗೂ ಸಿಬ್ಬಂದಿಗಳಾದ ಪುನೀತ್, ಹೇಮರಾಜ್, ಅಶೋಕ್ ರವರುಗಳು ಬಂಟ್ವಾಳ ತಾಲೂಕು ನರಿಂಗಾನ ಗ್ರಾಮದ ಕೆದಂಬಾಡಿ ಜಂಕ್ಷನ್ ನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಹನ್ನೊಂದು ಸಾವಿರ ರೂಪಾಯಿ ದಂಡ ವಿಧಿಸಿದೆ.

LEAVE A REPLY

Please enter your comment!
Please enter your name here