ಬೊಳುವಾರು: ಬಸ್‌ನಿಂದ ಬಿದ್ದು ವಿದ್ಯಾರ್ಥಿಗಳಿಬ್ಬರಿಗೆ ಗಾಯ

0

ಪುತ್ತೂರು: ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವಿದ್ಯಾರ್ಥಿಗಳಿಬ್ಬರು ಗಾಯಗೊಂಡ ಘಟನೆ ಜ.11ರಂದು ಬೆಳಿಗ್ಗೆ ಪುತ್ತೂರು ನಗರದ ಬೊಳುವಾರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಸಾಂದರ್ಭಿಕ ಚಿತ್ರ

ವಿವೇಕಾನಂದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪವನ್ ಕುಮಾರ್ ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ವಿದ್ಯಾರ್ಥಿ ಗಣೇಶ್ ಬಸ್‌ನಿಂದ ಬಿದ್ದು ಗಾಯಗೊಂಡವರು. ಅವರು ಕಾಲೇಜಿಗೆ ಬಸ್‌ನಲ್ಲಿ ಹೋಗುತ್ತಿದ್ದ ವೇಳೆ ಬಸ್‌ನಲ್ಲಿ ಪ್ರಯಾಣಿಕರು ತುಂಬಿದ್ದು, ಬಸ್ಸಿನ ಫುಟ್‌ ಬೋರ್ಡ್‌ ನಲ್ಲಿ ನಿಂತು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here