ಕುಂಬ್ರ ವರ್ತಕರ ಸಂಘದಿಂದ ವಿಜಯ ಪಾಟೀಲರ ಶ್ರದ್ಧಾಂಜಲಿ ಸಭೆ

0

ಪುತ್ತೂರು: ಒಳಮೊಗ್ರು ಗ್ರಾಮದ ಪರ್ಪುಂಜ ರಾಜ್ ಕಾಂಪ್ಲೆಕ್ಸ್‌ನಲ್ಲಿ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದ ವಿಜಯ ಎಂ.ಪಾಟೀಲ್‌ರವರು ಹೃದಯಾಘಾತದಿಂದ ನಿಧನ ಹೊಂದಿದ್ದು ಅವರಿಗೆ ಕುಂಬ್ರ ವರ್ತಕರ ಸಂಘದಿಂದ ಶ್ರದ್ಧಾಂಜಲಿ ಸಭೆಯು ಜ.12 ರಂದು ವರ್ತಕರ ಸಂಘದ ಕಛೇರಿಯಲ್ಲಿ ನಡೆಯಿತು.

ಸಂಘದ ಸ್ಥಾಪಕ ಅಧ್ಯಕ್ಷ ಶ್ಯಾಮಸುಂದರ ರೈ ಕೊಪ್ಪಳ ಮಾತನಾಡಿ, ವಿಜಯ ಎಂ.ಪಾಟೀಲ್‌ರವರು ಮೂಲತಃ ಗುಜರಾತ್‌ನವರಾಗಿದ್ದರು ಅಲ್ಲಿಂದ ನಮ್ಮೂರಿಗೆ ಬಂದು ಸುಮಾರು 25 ವರ್ಷಗಳಾಯಿತು. ಮೊದಲಿಗೆ ಸುಳ್ಯ ಅಲ್ಲಿಂದ ಈಶ್ವರಮಂಗಲ ಬಳಿಕ ಕುಂಬ್ರದಲ್ಲಿ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದರು. ಇವರು ವರ್ತಕರ ಸಂಘದ ಅಜೀವ ಸದಸ್ಯರಾಗಿದ್ದುಕೊಂಡು ಒಬ್ಬ ಉತ್ತಮ ವ್ಯಕ್ತಿಯಾಗಿದ್ದರು. ಅಗಲಿದ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ನುಡಿನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯ, ಮಾಜಿ ಅಧ್ಯಕ್ಷರುಗಳಾದ ಎಸ್.ಮಾಧವ ರೈ ಕುಂಬ್ರ, ನಾರಾಯಣ ಪೂಜಾರಿ ಕುರಿಕ್ಕಾರ, ದಿವಾಕರ ಶೆಟ್ಟಿ, ಮೆಲ್ವಿನ್ ಮೊಂತೆರೋ, ಜತೆ ಕಾರ್ಯದರ್ಶಿ ಚರಿತ್ ಕುಮಾರ್, ಕೋಶಾಧಿಕಾರಿ ಸಂಶುದ್ದೀನ್ ಎ.ಆರ್, ಮಾಜಿ ಉಪಾಧ್ಯಕ್ಷ ರಾಜೇಶ್ ರೈ ಪರ್ಪುಂಜ, ಹನೀಫ್, ಶುತಿಚಂದ್ರ, ಬಾಲಕೃಷ್ಣ ಪಾಟಾಳಿ, ಪದ್ಮನಾಭ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಮೊದಲು ಒಂದು ನಿಮಿಷದ ಮೌನ ಪ್ರಾರ್ಥನೆಯ ಮೂಲಕ ವಿಜಯ ಪಾಟೀಲ್‌ರವರ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು.

LEAVE A REPLY

Please enter your comment!
Please enter your name here