ಜ.15,16: ಕಾಂಚನ ಪೆರ್ಲ ದೇವಸ್ಥಾನದಲ್ಲಿ ಪಂಚಮಿ ಕಿರುಷಷ್ಠಿ ಉತ್ಸವ

0

ನೆಲ್ಯಾಡಿ: ಆಲಂತಾಯ ಗ್ರಾಮದ ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ವೇದಮೂರ್ತಿ ಉಚ್ಚಿಲತ್ತಾಯ ಕೆ.ಯು.ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜ.15 ಮತ್ತು 16ರಂದು ಪಂಚಮಿ ಕಿರುಷಷ್ಠಿ ಉತ್ಸವ ನಡೆಯಲಿದೆ.
ಜ.15ರಂದು ಸಂಜೆ 6ಕ್ಕೆ ಕ್ಷೇತ್ರಕ್ಕೆ ತಂತ್ರಿಗಳ ಆಗಮನ, ರಾತ್ರಿ 8ಕ್ಕೆ ರಂಗಪೂಜೆ, ಅನ್ನಸಂತರ್ಪಣೆ, ರಾತ್ರಿ 9ಕ್ಕೆ ಬಲಿ ಹೊರಡುವುದು, ಕಟ್ಟೆಪೂಜೆ, ನೃತ್ಯ ಬಲಿ ನಡೆಯಲಿದೆ. ಜ.16ರಂದು ಬೆಳಿಗ್ಗೆ 7ರಿಂದ ಗಣಪತಿ ಹೋಮ,ಕಲಶಪೂಜೆ, ದೇವರ ಬಲಿ ಹೊರಡುವುದು, ದರ್ಶನ ಬಲಿ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಬಟ್ಟಲುಕಾಣಿಕೆ, ಕಲಶಾಭಿಷೇಕ, ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ. ಮಧಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಶಾಲಾ ಮಕ್ಕಳಿಂದ ಯಕ್ಷಗಾನ:
ಪಂಚಮಿ ಕಿರುಷಷ್ಠಿ ಉತ್ಸವದ ಪ್ರಯುಕ್ತ ಜ.15ರಂದು ಸಂಜೆ 6ರಿಂದ ವರೆಗೆ ದೇವಸ್ಥಾನದ ವಠಾರದಲ್ಲಿ ಗೋಳಿತ್ತಟ್ಟು ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಂದ ಇದೇ ಮೊದಲ ಬಾರಿಗೆ ‘ಮಹಿಷ ಮರ್ಧಿನಿ-ಶಾಂಭವಿ ವಿಜಯ’ ಎಂಬ ಕನ್ನಡ ಕಥಾ ಭಾಗ ಯಕ್ಷಗಾನ ಬಯಲಾಟ ನಡೆಯಲಿದೆ.

LEAVE A REPLY

Please enter your comment!
Please enter your name here