![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಆಲಂಕಾರು: ಸೀಮಾ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನ ದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಜ.14ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮತ್ತು ದೊಡ್ಡ ರಂಗಪೂಜೆ ನಡೆಯಲಿದೆ. ಬೆಳಿಗ್ಗೆ ನಾಗತಂಬಿಲ, ದೈವಗಳಿಗೆ ತಂಬಿಲ ಸೇವೆ ನಡೆದು ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ದೊಡ್ಡ ರಂಗಪೂಜೆ ಮಹಾಗಣಪತಿ ರಂಗಪೂಜೆ, ಸತ್ಯನಾರಾಯಣ ಮಹಾಪೂಜೆ, ನಂತರ ಬಲಿ ಹೊರಟು ಉತ್ಸವ ನಡೆದು ಅನ್ನಸಂತರ್ಪಣೆ ನಡೆಯಲಿದೆ ಎಂದು ಆಡಳಿತಾಧಿಕಾರಿ ಗೋಪಾಲ.ಕೆ ಹಾಗೂ ಅರ್ಚಕರು ಮತ್ತು ಸಿಬ್ಬಂದಿ ವರ್ಗದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![](https://puttur.suddinews.com/wp-content/uploads/2024/01/55bdd6a3-c08e-4577-8037-74238f0f797e.jpg)