ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

0

ಪುತ್ತೂರು: ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ಶಾಲಾ ಪ್ರಥಮ ವಾರ್ಷಿಕ ಕ್ರೀಡೋತ್ಸವ” ಕಾರ್ಯಕ್ರಮ ಜ.13ರಂದು ನಡೆಯಿತು.


ಪುತ್ತೂರು ನಗರ ಸಭೆ ಸದಸ್ಯ ಸುಂದರ ಪೂಜಾರಿ ಬಡಾವು ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿ ದೈಹಿಕ ಶಿಕ್ಷಣ ಶಿಕ್ಷಕ ಮಾಧವ ಗೌಡ ಪೆರಿಯತ್ತೋಡಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಎವಿಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ ರವರು ರಾಷ್ಟ್ರೀಯ ಯುವ ದಿನದ ಬಗ್ಗೆ ಮಾತನಾಡಿ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ನುಡಿದರು.

ಸಂಸ್ಥೆಯ ಸಂಚಾಲಕ ಎ.ವಿ. ನಾರಾಯಣ ಗೌಡ ಸ್ವಾಗತಿಸಿ, ನಿರ್ದೇಶಕಿ ಪ್ರತಿಭಾ ದೇವಿ ಅತಿಥಿಗಳ ಪರಿಚಿಯಿಸಿದರು. ಕಾರ್ಯಕ್ರಮದಲ್ಲಿ ನಗರಸಭೆ ಸ್ಥಳೀಯ ಸದಸ್ಯೆ ಗೌರಿ ಬನ್ನೂರು, ಸಂಸ್ಥೆಯ ಪ್ರಾಂಶುಪಾಲೆ ಉಷಕಿರಣ ಕೆ.ಎಸ್, ಸಹ ಶಿಕ್ಷಕಿ ವನಿತಾ, ಸಹಾಯಕರಾದ ಭುವನೇಶ್ವರಿ ಹಾಗೂ ಆನಂದ ಹಾಗೂ ವಿದ್ಯಾರ್ಥಿಗಳ ಪೋಷಕರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಸಂಸ್ಥೆಯ ಪುಟಾಣಿ ಮಕ್ಕಳಾದ ಕು.ತನಿಷ್ಕ, ಕು.ಆನ್ವಿ, ಕು.ಶಿವಾನಿ ಪ್ರಾರ್ಥಿಸಿದರು. ಸಂಸ್ಥೆಯ ಉಪಾಧ್ಯಕ್ಷ ಉಮೇಶ್ ಗೌಡ ಮಳುವೇಲು ವಂದಿಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ದೈಹಿಕ ಶಿಕ್ಷಣ ಶಿಕ್ಷಕ ಮಾಧವ ಗೌಡ ಪೆರಿಯತ್ತೋಡಿಯವರು ಕ್ರೀಡಾಕೂಟದ ನಿರ್ವಹಣೆ ಮಾಡಿದರು. ಸಂಸ್ಥೆಯ ಸಹ ಶಿಕ್ಷಕಿ ಯಶುಭ ರೈ ಇವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here