ಕೌಡಿಚ್ಚಾರು ವಿವೇಕಾನಂದ ಯುವಕ ವೃಂದದಿಂದ ವಿವೇಕ ಜಯಂತಿ

0

ಅರಿಯಡ್ಕ:ಕೌಡಿಚ್ಚಾರು ವಿವೇಕಾನಂದ ಯುವಕ ವೃಂದದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯು ಸಂಸ್ಥೆಯ ಕಚೇರಿಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಯುವಕ ವೃಂದದ ಸದಸ್ಯ ಸಾಂತಪ್ಪ ಕುಲಾಲ್ ಕೌಡಿಚ್ಚಾರು ದೀಪ ಪ್ರಜ್ವಲಿಸಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು.

ಯುವಕ ವೃಂದದ ಗೌರವಾಧ್ಯಕ್ಷ ಬಾಲಕೃಷ್ಣ ಕುಲಾಲ್ ವಿವೇಕಾನಂದರ ತತ್ವ ಸಿದ್ಧಾಂತ ಆದರ್ಶಗಳ ಬಗ್ಗೆ ಉಪನ್ಯಾಸ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ವೃಂದದ ಅಧ್ಯಕ್ಷ ಉದಯ ರಾಜ್ ಆಕಾಯಿ ವಹಿಸಿದ್ದರು. ಈ ಸಂದರ್ಭದಲ್ಲಿ ಯುವಕ ವೃಂದದ ಸದಸ್ಯರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು. ಯುವಕ ವೃಂದದ ಮಾಜಿ ಉಪಾಧ್ಯಕ್ಷ ಮುಕುಂದ ನಾಯ್ಕ ವಂದಿಸಿ, ಸಾಂಸ್ಕೃತಿಕ ಜತೆ ಕಾರ್ಯದರ್ಶಿ ಚರಣ್ ರಾಜ್ ಎಂ ಡಿ ಸ್ವಾಗತಿಸಿ , ನಿರೂಪಿಸಿದರು.

LEAVE A REPLY

Please enter your comment!
Please enter your name here