ಜ.17: ಪಡ್ನೂರು ದೇಂತಡ್ಕ ವನಶಾಸ್ತಾರ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

0

ಪುತ್ತೂರು:ಪಡ್ನೂರು ಗ್ರಾಮದ ದೇಂತಡ್ಕ ಶ್ರೀ ವನಶಾಸ್ತಾರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ಜ.17ರಂದು ವೇ.ಮೂ ಮಿತ್ತೂರು ಪುರೋಹಿತ ಸದಾಶಿವ ಭಟ್‌ರವರ ಹಿರಿತನದಲ್ಲಿ ವೇ.ಮೂ ಮಿತ್ತೂರು ಪುರೋಹಿತ ತಿರುಮಲೇಶ್ವರ ಭಟ್‌ರವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.


ಬೆಳಿಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ, ನವಕಕಲಶ, ನಾಗತಂಬಿಲ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಸಾರ್ವಜನಿಕ ದುರ್ಗಾಪೂಜೆ, ಸಾರ್ವಜನಿಕ ಆಶ್ಲೇಷ ಬಲಿ, ದೈವಗಳ ತಂಬಿಲ, ರಂಗಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಪ್ರತಿಷ್ಠಾ ವಾರ್ಷಿಕ ಮಹೋತ್ಸವದಲ್ಲಿ ಬೆಳಿಗ್ಗೆಯಿಂದ ಸಂಜೆ ತನಕ ವಿವಿಧ ಭಜನಾ ತಂಡಗಳಿಂದ ಭಜನೆ, ರಾತ್ರಿ ಕುಣಿತ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ರಾತ್ರಿ ಬಂಗಾರ್ ಕಲಾವಿದೆರ್ ಪುರುಷರಕಟ್ಟೆ ಅಭಿನಯಿಸುವ ‘ಕುಡ ಒಂಜಾಕ’ ಎಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here