ಸವಣೂರು : ವಿದ್ಯಾರಶ್ಮಿಯಲ್ಲಿ ಯುವ ಸಪ್ತಾಹ ಕಾರ್ಯಕ್ರಮ

0

ಸವಣೂರು : ಜಿಲ್ಲಾಡಳಿತ, ದ.ಕ.ಜಿ.ಪಂ.,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು,ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ ಇದರ ಆಶ್ರಯದಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ಯುವ ಸಪ್ತಾಹ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಸವಣೂರು ಸ.ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್ ಎಂ. ಉದ್ಘಾಟಿಸಿ, ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ಗ್ರಾ.ಪಂ.ಲೆಕ್ಕಾಧಿಕಾರಿ ಎ.ಮನ್ಮಥ ವಹಿಸಿದ್ದರು.ವೇದಿಕೆಯಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ನಾರಾಯಣ ಮೂರ್ತಿ ಉಪಸ್ಥಿತರಿದ್ದರು.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಸ್ವಾಗತಿಸಿ,ವಿದ್ಯಾರಶ್ಮಿ ವಿದ್ಯಾಲಯದ ಉಪಪ್ರಾಚಾರ್ಯೆ ಶಶಿಕಲಾ ಆಳ್ವ ವಂದಿಸಿದರು.

LEAVE A REPLY

Please enter your comment!
Please enter your name here