ಕುಸ್ತಿ ಫೆಡರೇಷನ್ ಜಂಟಿ ಕಾಯದರ್ಶಿ ಗುಣರಂಜನ್ ಶೆಟ್ಟಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

0

ಪುತ್ತೂರು: ರಾಷ್ಟ್ರೀಯ ಕುಸ್ತಿ ಫೆಡರೇಷನ್ ಜಂಟಿ ಕಾಯದರ್ಶಿ ಬಿ.ಗುಣರಂಜನ್ ಶೆಟ್ಟಿ ಜ.14ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.‌
ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರೂ ಅಗಿರುವ ಚಿಕ್ಕಮುಡ್ನೂರು ಉರಮಾಲು ನಿವಾಸಿ ಗುಣರಂಜನ್ ಶೆಟ್ಟಿ ಅವರು ಕುಸ್ತಿ ಫೆಡರೇಶನ್ ಜಂಟಿ‌ ಕಾಯದರ್ಶಿಯಾಗಿ ಆಯ್ಕೆಯಾದ ಬಳಿಕ ಪ್ರಥಮ‌ ಬಾರಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.‌

ದೇವಳಕ್ಕೆ ಭೇಟಿ ನೀಡಿದ ವೇಳೆ ಗುಣರಂಜನ್ ಶೆಟ್ಟಿ ಅವರು ಶಾಸಕ ಅಶೋಕ್ ಕುಮಾರ್ ರೈ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ‌ ಪ್ರಸಾದ್ ಮುಳಿಯ, ಖ್ಯಾತ ವಕೀಲ ಮಹೇಶ್ ಕಜೆ ಅವರೊಂದಿಗೆ ಮಾತುಕತೆ ನಡೆಸಿದರು. ಜಯರ‍್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕ ರಾಮದಾಸ್ ಶೆಟ್ಟಿ ವಿಟ್ಲ ಮುಂತಾದವರು ಉಪಸ್ಥಿತರಿದ್ದರು. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರು ಖ್ಯಾತ ಚಲನಚಿತ್ರ ನಟಿ ಅನುಷ್ಕಾ ಶೆಟ್ಟಿ ಅವರ ಸಹೋದರ.

LEAVE A REPLY

Please enter your comment!
Please enter your name here