ಹಿರಿಯರ ಕ್ರೀಡಾಕೂಟದಲ್ಲಿ ವೆಂಕಟೇಶ್ ಪ್ರಸಾದ್ ದರ್ಬೆತ್ತಡ್ಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಜ.13 ಮತ್ತು 14ರಂದು ನಡೆದ 42ನೇ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ದರ್ಬೆತ್ತಡ್ಕ ನಿವಾಸಿ ವೆಂಕಟೇಶ್ ಪ್ರಸಾದ್ ಇವರು 45+ ವಯೋಮಾನದ ಹೈಜಂಪ್ ನಲ್ಲಿ ಪ್ರಥಮ, 110 ಮೀ ಹರ್ಡಲ್ಸ್ ನಲ್ಲಿ ದ್ವಿತೀಯ ಮತ್ತು ಹ್ಯಾಮರ್ ತ್ರೋ ದಲ್ಲಿ ತೃತೀಯ ಸ್ಥಾನ ಗಳಿಸಿ ಫೆ. 2ರಿಂದ 4ರವರೆಗೆ ತಮಿಳುನಾಡಿನ ತಿರುನಲ್ವೇಲಿಯಲ್ಲಿ ನಡೆಯಲಿರುವ 43ನೇ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಸ್ತುತ ಇವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿ ಸಂಸ್ಕ್ರತ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಕುಂಟಾಪು ದಿ.ರಾಮಚಂದ್ರ ಭಟ್ ಮತ್ತು ಸರಸ್ವತಿ ಆರ್. ಭಟ್ ದಂಪತಿ ಪುತ್ರ.

LEAVE A REPLY

Please enter your comment!
Please enter your name here