ಹಿರಿಯರ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಮಂಗಳೂರಿನ ಮಂಗಳಾ ಸ್ಟೇಡಿಯಂ ನಲ್ಲಿ ಜ.13 ಮತ್ತು 14ರಂದು ನಡೆದ 42 ನೇ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ದರ್ಬೆ ನಿವಾಸಿ ಪ್ರಸ್ತುತ ಕ್ಯಾಂಪ್ಕೊ ಚಾಕ್ಲೇಟ್ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿರುವ ಕರುಣಾಕರ ಪ್ರಭು ಇವರು 40ರ ವಯೋಮಾನದ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ, ಉದ್ದ ಜಿಗಿತ ಮತ್ತು 4 x100 ಮೀ ಮಿಶ್ರ ರಿಲೇ ಯಲ್ಲಿ ದ್ವಿತೀಯ, 4×100 ಪುರುಷರ ರಿಲೇ ಯಲ್ಲಿ ತೃತೀಯ ಸ್ಥಾನ ಪಡೆದು, ಫೆ.2 ರಿಂದ 4ರವರೆಗೆ ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಅಂಡಿಂಜೆ ದಿ. ವೆಂಕಟೇಶ ಮತ್ತು ವಿಮಲಾ ಪ್ರಭು ದಂಪತಿ ಪುತ್ರ.

LEAVE A REPLY

Please enter your comment!
Please enter your name here