ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಬನ್ನೂರು ಶ್ರೀ ದೆಯ್ಯರಮಾಡ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

0

ಪುತ್ತೂರು: ಫೆ.21, 22ರಂದು ಬ್ರಹ್ಮಕಲಶೋತ್ಸವ ನಡೆಯಲಿರುವ ಬನ್ನೂರು ಶ್ರೀ ದೆಯ್ಯರಮಾಡ, ಇಷ್ಟ ದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ, ಸಾನಿಧ್ಯಗಳಿಗೆ ಜ.15ರಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭೇಟಿ ನೀಡಿ ಕ್ಷೇತ್ರದ ಜೀರ್ಣೋದ್ದಾರ ಕಾಮಗಾರಿಗಳನ್ನು ವೀಕ್ಷಿಸಿದರು. ಈ ಸಂದರ್ಭ ಕ್ಷೇತ್ರದ ಬಳಿಯ ತಡೆಗೋಡೆ, ರಸ್ತೆಗೆ ಸಂಬಂಧಿಸಿದ ಮನವಿಯನ್ನು ಸ್ವೀಕರಿಸಿದರು‌.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭೆ ಸ್ಥಳೀಯ ಸದಸ್ಯೆ ಗೌರಿ ಬನ್ನೂರು, ಕ್ಷೇತ್ರದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಎ ವಿ‌ನಾರಾಯಣ, ಕಾರ್ಯದರ್ಶಿ ಮೌನೀಶ್, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಗೌಡ, ಪ್ರಧಾನ ಕಾರ್ಯದರ್ಶಿ ರತ್ನಾಕರ ರೈ ಕೆಳಗಿನಮನೆ, ಖಜಾಂಜಿ ರಮೇಶ್ ಗೌಡ ನೀರ್ಪಾಜೆ, ಉಪಾಧ್ಯಕ್ಷ ಹರಿಪ್ರಸಾದ್, ನಾರಾಯಣ ಗೌಡ ಬನ್ನೂರು, ಮಾಜಿ ಪುರಸಭಾ ಅಧ್ಯಕ್ಷ ರಾಜೇಶ್ ಬನ್ನೂರು, ಅಜಿತ್ ರೈ ಹೊಸಮನೆ, ಸವಿನ್ ಬನ್ನೂರು, ಬಿಜೆಪಿ ಬೂತ್ ಅಧ್ಯಕ್ಷ ಚಂದ್ರಶೇಖರ್, ಸಹಿತ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here