ಉದಯಗಿರಿ ಮುಂಡೂರು ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ವಾರ್ಷಿಕೋತ್ಸವ

0

ಪುತ್ತೂರು: ಮುಂಡೂರು ಉದಯಗಿರಿ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ ವರ್ಷಕೋತ್ಸವದ ಪ್ರಯುಕ್ತ ಮಕರ ಸಂಕ್ರಾಂತಿಯ ದಿನದಂದು ಕುಣಿತ ಭಜನೆ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಅನ್ನದಾನಕ್ಕೆ ಸಹಕರಿಸಿದ ಮಹನೀಯರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ದೈವಸ್ಥಾನದ ಅರ್ಚಕ ಚಂದ್ರಹಾಸ ಕೊಡಿಜಾಲ್ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಸದಾಶಿವ ಶೆಟ್ಟಿ ಪಟ್ಟೆ, ಅನಿಲ್ ಕಣ್ಣರ್ನುಜಿ, ಈಶ್ವರ ನಾಯ್ಕ ಅಜಲಾಡಿ, ಬಾಲಕೃಷ್ಣಶೆಟ್ಟಿ ಪಂಜಳ, ಭಜನಾ ಮಂಡಳಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪಂಜಳ ಹಾಗೂ ಭಜನಾ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ದೇವಿದಾಸ್ ಕುರಿಯ ನೆರವೇರಿಸಿದರು.

LEAVE A REPLY

Please enter your comment!
Please enter your name here