ಬೆಳ್ತಂಗಡಿ ಶ್ರೀಗುರುನಾರಾಯಣ ಸ್ವಾಮಿ ಸೇವಾಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು ಆಯ್ಕೆ

0

ಪುತ್ತೂರು: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 2022-23ನೇ ಸಾಲಿನ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು ಆಯ್ಕೆಯಾಗಿದ್ದಾರೆ. ಕರಾಯ ಗ್ರಾಮದ ಕಲ್ಲಾಪು ನಿವಾಸಿಯಾಗಿರುವ ಜಯವಿಕ್ರಮ್ ಅವರು ಸಾಮಾಜಿಕ, ರಾಜಕೀಯ ಸಂಘಟನೆಯಲ್ಲಿ ತೊಡಗಿಕೊಂಡವರು. ಉಪ್ಪಿನಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ, ಉಪ್ಪಿನಂಗಡಿ ಜೇಸಿಐ ಅಧ್ಯಕ್ಷರಾಗಿ, ಜೇಸಿ ವಲಯ ಉಪಾಧ್ಯಕ್ಷರಾಗಿ, ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಹಾಲಿ ಸದಸ್ಯರಾಗಿ, ತಣ್ಣೀರುಪಂತ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರಾಗಿ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿರುವ ಜಯವಿಕ್ರಮ್ ಅವರು ಪ್ರಸ್ತುತ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಸಂಘದ ಸಭಾಭವನದಲ್ಲಿ ಜರಗಿತು. ಸಂಘದ ಗೌರವಾಧ್ಯಕ್ಷ ಮಾಜಿ ಶಾಸಕ ಕೆ.ವಸಂತ ಬಂಗೇರ ಪದಾಧಿಕಾರಿಗಳ ಹೆಸರು ಘೋಷಣೆ ಮಾಡಿದರು. ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಅಶ್ವಥ್ ಕುಮಾರ್ ಚುನಾವಣಾಧಿಕಾರಿಯಾಗಿದ್ದರು.

LEAVE A REPLY

Please enter your comment!
Please enter your name here