ಜ.17 : ಸವಣೂರಿನಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಗೆ ಚಾಲನೆ

0

ಸವಣೂರು : ಸವಣೂರು ಗ್ರಾಮ ಪಂಚಾಯತ್ ,ಕೆನರಾ ಬ್ಯಾಂಕ್ ಶಾಖೆ ಸವಣೂರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸವಣೂರು ಇವರ ಸಹಕಾರದೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ 2023-24 ಚಾಲನೆ ಕಾರ್ಯಕ್ರಮ ಜ.17ರಂದು   ಬೆಳಿಗ್ಗೆ 10 ಗಂಟೆಗೆ ಸವಣೂರು ಪ್ರಾ.ಕೃ.ಪ.ಸ.ಸಂಘದ ವಠಾರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸುವರು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್ ಅವರು ಅಧ್ಯಕ್ಷತೆ ವಹಿಸುವರು.

ಕಾರ್ಯಕ್ರಮದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ, ಜೀವನ್ ಜ್ಯೋತಿ ಭೀಮಾ ಯೋಜನೆ, ಉಜ್ವಲ್ ಗ್ಯಾಸ್ ಯೋಜನೆ, ಗ್ರಾ.ಪಂ.25% ನಿಧಿ ಮತ್ತು 5% ನಿಧಿಯಿಂದ ಚೆಕ್ ವಿತರಣೆ, ಆರೋಗ್ಯ ತಪಾಸಣೆ, ಕಂದಾಯ ಇಲಾಖೆಯಿಂದ ದೊರೆಯುವ ಸವಲತ್ತು ವಿತರಣೆ ನಡೆಯಲಿದೆ ಮತ್ತು ಕೇಂದ್ರ ಸರಕಾರದಿಂದ ಅನುಷ್ಠಾನವಾಗುವ ಯೋಜನೆಗಳ ಮಾಹಿತಿ ನೀಡಲಾಗುತ್ತದೆ ಎಂದು ಸವಣೂರು ಗ್ರಾ.ಪಂ, ಕೆನರಾ ಬ್ಯಾಂಕ್, ಸವಣೂರು ಪ್ರಾ.ಕೃ.ಪ.ಸ.ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here