ಅಕ್ಷತೆ ವಿತರಣೆ ಮಾಡಿ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಮಾಡಿರುವುದು ಖಂಡನೀಯ-ಕಿಶೋರ್ ಬೊಟ್ಯಾಡಿ

0

ಪುತ್ತೂರು: ಅಯೋಧ್ಯೆಯ ಅಕ್ಷತೆ ವಿತರಣೆ ಮಾಡಿ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಪುತ್ತಿಲ ಪರಿವಾರದವರ ಕೃತ್ಯ ಖಂಡನೀಯ ಎಂದು ಬಿಜೆಪಿ ಯುವ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದ್ದಾರೆ. ಹಲ್ಲೆಗೊಳಗಾದ ಬಿ.ಕೆ.ಸಂತೋಷ್ ಮತ್ತಿತರರನ್ನು ಭೇಟಿಯಾದ ಅವರು ಮಾಧ್ಯಮದ ಜೊತೆ ಮಾತನಾಡಿದರು. ಬಿಜೆಪಿ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದ ಯುವಕರು ಹಲ್ಲೆ ಮಾಡಿರುವುದು ಖಂಡನೀಯ, ನಮಗೆ ಶಸ್ತ್ರ ಹಿಡಿದು ಗೊತ್ತು, ಶಾಸ್ತ್ರ ಓದಿಯೂ ಗೊತ್ತು. ಪುತ್ತಿಲ ಅವರು ಒಂದು ಕಡೆ ಬಿಜೆಪಿಗೆ ಬರಬೇಕು ಎಂದು ಹೇಳುತ್ತಿದ್ದಾರೆ. ಅದನ್ನು ನಮ್ಮ ಬಿಜೆಪಿಯ ಹಿರಿಯ ನಾಯಕರು ನಿರ್ಧರಿಸುತ್ತಾರೆ. ಬಿಜೆಪಿಯ ಹಿರಿಯ ನಾಯಕರ ನಿರ್ಧಾರಕ್ಕೆ ನಾವೂ ಬದ್ಧರಾಗಿರುತ್ತೇವೆ. ಆದರೆ ಪುತ್ತಿಲ ಪರಿವಾರ ಒಂದು ಕಡೆ ಸಂಧಾನ, ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಮಾಡೋದು ಇದು ಸರಿಯಲ್ಲ, ಬಿಜೆಪಿ ಕಾರ್ಯಕರ್ತ ಸಂತೋಷ್ ಅಯೋಧ್ಯೆಯ ಅಕ್ಷತೆ ವಿತರಣೆ ಮಾಡಿ ಹಿಂತಿರುಗುವಾಗ ಹಲ್ಲೆ ಮಾಡಿದ್ದಾರೆ. ಪುತ್ತಿಲ ಪರಿವಾರದ ಧನಂಜಯ ಮತ್ತು ತಂಡದವರು ಹಲ್ಲೆ ಮಾಡಿದ್ದಾರೆ. ಪುತ್ತಿಲ ಪರಿವಾರ ಗಲಭೆ ಎಬ್ಬಿಸಿ ಸಮಾಜದ ಶಾಂತಿ ಕದಡುವ ಕೆಲಸ ಮಾಡಬೇಡಿ, ಹಿಂದೂ ಸಮಾಜ ಒಗ್ಗಟ್ಟಾಗಿ ಇರುವಂತೆ ನೋಡಿಕೊಳ್ಳೋಣ ಎಂದರು. ಈ ಸಂದರ್ಭ ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here