ಫೆ.4: ಸಂಟ್ಯಾರು ಕಲ್ಲಕಟ್ಟದಲ್ಲಿ ಶ್ರೀ ರಾಜಗುಳಿಗ ದೈವದ ಕೋಲ – ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ವಿಶೇಷ ಕಾರಣಿಕತೆಯನ್ನು ಹೊಂದಿರುವ ಭಕ್ತಿಯಿಂದ ನಂಬಿದ ಭಕ್ತರ ಇಷ್ಟರ್ಥ ಗಳನ್ನು ಈಡೇರಿಸುವ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರು ಕಲ್ಲಕಟ್ಟದಲ್ಲಿ ಶ್ರೀ ರಾಜ ಗುಳಿಗ ದೈವದ ಸಾನಿಧ್ಯದಲ್ಲಿ ನೆಲೆಯಾಗಿರುವ ಶ್ರೀ ರಾಜ ಗುಳಿಗ ದೈವದ ಕೋಲವು ಫೆ.4ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಜ.14 ಮಕರ ಸಂಕ್ರಮಣ ಶುಭ ದಿನದಂದು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಪ್ರಧಾನ ಸೇವಕರು,ಊರಿನ ಭಕ್ತ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಫೆ.4ರಂದು ಬೆಳಿಗ್ಗೆ ವೈಧಿಕ ಕಾರ್ಯಕ್ರಮಗಳು ನಡೆದು ಮಧ್ಯಾಹ್ನ ಅನ್ನಸಂತರ್ಪಣೆಯ ಬಳಿಕ ಶ್ರೀ ರಾಜ ಗುಳಿಗ ದೈವದ ಕೋಲ ನಡೆಯಲಿದೆ. ಕೋಲದ ಬಳಿಕವೂ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾನ್ನಿಧ್ಯದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here