ಬೊಳಿಕ್ಕಲ: ನಿವೃತ್ತ ಸೇನಾಧಿಕಾರಿಯೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ

0

ಪುತ್ತೂರು: ವಿದ್ಯಾರ್ಥಿಗಳು ಎಳವೆಯಲ್ಲಿಯೇ ಕ್ರೀಡೆಯೊಂದಿಗೆ ತೊಡಗಿಸಿಕೊಳ್ಳಬೇಕು. ಆರೋಗ್ಯಕರ ಆಹಾರ ಅಭ್ಯಾಸವನ್ನು ರೂಢಿಸಿಕೊಂಡು ಪ್ರಧಾನಿಯವರ ಸ್ವಚ್ಛ ಭಾರತ ಪರಿಕಲ್ಪನೆಯನ್ನು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಿವೃತ್ತ ಸೇನಾಧಿಕಾರಿ ರಮೇಶ್ ರೈ ಬೋಳೋಡಿ, ಅಬ್ಬೆ ಜಾಲು ಹೇಳಿದರು.

ಅವರು ಬೊಳಿಕ್ಕಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ಭೂಸೇನೆಯಲ್ಲಿ ತನ್ನ ಸೇವೆಯನ್ನು ಸಲ್ಲಿಸಿ ನಂತರ ಮಸ್ಕತ್ ನಲ್ಲಿ ಸೇನಾ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿ ,ಹಲವು ಸೇನಾ ಪದಕ ಪುರಸ್ಕೃತರಾದ ಇವರು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಶ್ರದ್ಧೆ, ಸತತ ಪ್ರಯತ್ನ ಹಾಗೂ ಸಮಯ ಪ್ರಜ್ಞೆಯನ್ನು ಮೈಗೂಡಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ರಮೇಶ್ ರೈಯವರ ಪತ್ನಿ ವಿಜಯ, ಶಾಲಾ ಮುಖ್ಯ ಗುರು ಶಶಿಕಲಾ ಹಾಗೂ ಶಿಕ್ಷಕ ವೃಂದದವರು, ಅಡುಗೆ ಸಿಬ್ಬಂದಿ ಲತಾ, ಪೋಷಕರಾದ ರೇವತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here