ಕುಂಬ್ರ ಶುಭಲಕ್ಷ್ಮೀ ನಿಧನ: ಸರಕಾರಿ ಆಸ್ಪತ್ರೆಗೆ ಬಿಜೆಪಿ ಗಣ್ಯರ ಭೇಟಿ – ಸಂತಾಪ

0

ಪುತ್ತೂರು: ಮನೆಯ ಬಳಿಯ ಗುಡ್ಡದ ಮೇಲಿನ ಕೃತಕ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮೀ ಮೃತ ದೇಹ ಮರಣೋತ್ತರ ಪರೀಕ್ಷೆಗೆ ಸರಕಾರಿ ಆಸ್ಪತ್ರೆಗೆ ತಂದಿದ್ದ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಡಾ.ಎಂ.ಕೆ.ಪ್ರಸಾದ್ ಸಹಿತ ಹಲವಾರು ಮಂದಿ ಬಿಜೆಪಿ ನಾಯಕರು ಭೇಟಿ ನೀಡಿ ಸಂತಾಪ ಸೂಚಿಸಿದರು.


ಈ ಸಂದರ್ಭ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಎಸ್ ಅಪ್ಪಯ್ಯ ಮಣಿಯಾಣಿ, ಬಿಜೆಪಿ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ದ.ಕ‌ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ಸಹಜ್ ರೈ ಬಳಜ್ಜ, ದಯಾನಂದ ಉಜಿರುಮಾರು, ಹರೀಶ್ ಬಿಜತ್ರೆ, ಹರಿಪ್ರಸಾದ್ ಯಾದವ್, ಜಯಂತ ಶೆಟ್ಟಿ ಕಂಬಳದಡ್ಡ, ರಮೇಶ್ ರೈ ಡಿಂಬ್ರಿ, ಮತ್ತಿತರರು ಭೇಟಿ ಜೊತೆಗಿದ್ದರು.

LEAVE A REPLY

Please enter your comment!
Please enter your name here