ಜ.18-ಜ.20: ಹಣಿಯೂರು ಗುತ್ತು ಪರಿವಾರ ಬಂಟರ ತರವಾಡು ದೈವಸ್ಥಾನದಲ್ಲಿ ದೈವಗಳ ಧರ್ಮನೇಮೋತ್ಸವ

0

ಪುತ್ತೂರು: ಕೊಡಿಪಾಡಿ ಗ್ರಾಮದ ಹಣಿಯೂರು ಗುತ್ತು ಪರಿವಾರ ಬಂಟರ ತರವಾಡು ದೈವಸ್ಥಾನದಲ್ಲಿ ಜ.18ರಿಂದ ಜ.20ರ ವರೆಗೆ ಶ್ರೀ ಧೂಮಾವತಿ-ಬಂಟ, ವರ್ಣರ ಪಂಜುರ್ಲಿ, ಕಲ್ಲುರ್ಟಿ, ಕೊರತಿ, ಜಾವತೆ, ಗುಳಿಗ ಹಾಗೂ ಪರಿವಾರ ದೈವಗಳ ಧರ್ಮನೇಮೋತ್ಸವ ನಡೆಯಲಿದೆ.
ಜ.18ರಂದು ಬೆಳಗ್ಗೆ ಗಣಪತಿ ಹೋಮ, ನಾಗತಂಬಿಲ, ಚಂಡಿಕಾಹೋಮ, ಹರಿಸೇವೆ ನಡೆಯಲಿದೆ. ಮಧ್ಯಾಹ್ನ ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ ವರ್ಣರ ಪಂಜುರ್ಲಿ ಹಾಗೂ ಜಾವತೆ ದೈವಗಳ ಭಂಡಾರ ತೆಗೆದು ನೇಮೋತ್ಸವ ನಡೆಯಲಿದೆ. ರಾತ್ರಿ 9 ಗಂಟೆಯಿಂದ ಅನ್ನಸಂತರ್ಪಣೆ ನಡೆಯಲಿದೆ.

ಜ.19ರಂದು ಸಾಯಂಕಾಲ ಪಂಜುರ್ಲಿ, ಕರ್ಲುಟ್ಟಿ, ಕೊರತಿ ದೈವಗಳ ಭಂಡಾರ ತೆಗೆದು ನೇಮೋತ್ಸವ ನಡೆಯಲಿದೆ. ರಾತ್ರಿ 9 ಗಂಟೆಯಿಂದ ಅನ್ನಸಂತರ್ಪಣೆ ನಡೆಯಲಿದೆ.
ಜ.20ರಂದು ಸಾಯಂಕಾಲ ಶ್ರೀ ಧರ್ಮದೈವ ಧೂಮಾವತಿ-ಬಂಟ ದೈವಗಳ ಭಂಡಾರ ತೆಗೆದು ನೇಮೋತ್ಸವ, ಮತ್ತು ಗುಳಿಗ ನೇಮೋತ್ಸವ ಹಾಗೂ ದೈವಗಳ ಕುರಿತಂಬಿಲ ನಡೆಯಲಿದೆ. ರಾತ್ರಿ 9 ಗಂಟೆಯಿಂದ ಅನ್ನಸಂತರ್ಪಣೆ ನಡೆಯಲಿದೆ ಎಂದು ಹಣಿಯೂರು ಫ್ಯಾಮಿಲಿ ಡೈಟಿಸ್ ಟ್ರಸ್ಟ್ ನ ಅಧ್ಯಕ್ಷ ಡಾ. ಕೆ.ಸಿ. ನಾಯ್ಕ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here