ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

0

ಪುತ್ತೂರು: ಅರಿಯಡ್ಕ ಗ್ರಾಮದ ಮಜ್ಜಾರಡ್ಕದಲ್ಲಿ ಶ್ರಮ, ಸೇವೆ, ಸಹಾಯ ಎಂಬ ದ್ಯೇಯವಾಕ್ಯದೊಂದಿಗೆ ಸಮಾಜ ಸೇವೆ ಮಾಡುತ್ತಿರುವ ಯುವ ಸಂಘಟನೆ ಶ್ರೀ ವಿಷ್ಣು ಯುವಶಕ್ತಿ ಬಳಗವು ಯುವಜನ ಒಕ್ಕೂಟ ಕೊಡಮಾಡುವ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದೆ. ದ.ಕ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಪಂಚಾಯತ್ ಕಡಬ, ಗ್ರಾಮ ಪಂಚಾಯತ್ ಸವಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ಜ.20 ಮತ್ತು 21 ರಂದು ಸವಣೂರಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿರುವ ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗವು ಈಗಾಗಲೇ ಸ್ವಚ್ಛಭಾರತ್ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಿದೆ ಎಂದು ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆ.ಮಯೂರರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here