ನರಿಂಗಾನ ಲವ-ಕುಶ ಕಂಬಳ ಸಮಿತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರಿಗೆ ಸನ್ಮಾನ

0

ಪುತ್ತೂರು: ಉಳ್ಳಾಲ ತಾಲೂಕಿನ ನರಿಂಗಾನ ಲವ-ಕುಶ ಕಂಬಳ ಸಮಿತಿಯಿಂದ ಜ.13 ರಂದು ಕಂಬಳೋತ್ಸವ ಜರಗಿದ್ದು, ಈ ಕಂಬಳೋತ್ಸವದಲ್ಲಿ ಜಿಲ್ಲಾ ರಾಜ್ಯೋತ್ಸವ
ಪ್ರಶಸ್ತಿ ಪುರಸ್ಕೃತ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರಿಗೆ ಸನ್ಮಾನ ಕಾರ್ಯಕ್ರಮ ನೆರವೇರಲ್ಪಟ್ಟಿತು.


ಈ ಸಂದರ್ಭದಲ್ಲಿ ರಾಜ್ಯ ಸರಕಾರದ ಸಭಾಪತಿ ಯು.ಟಿ ಖಾದರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ತಂತ್ರಿವರ್ಯರಾದ ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ, ನರಿಂಗಾನ ಕಂಬಳೋತ್ಸವದ ಗೌರವಾಧ್ಯಕ್ಷ ವೆಂಕಪ್ಪ ಕಾಜವ ಮಿತ್ರಕೋಡಿ, ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ, ಪ್ರಧಾನ ಕಾರ್ಯದರ್ಶಿ ಹಾಗೂ ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಜ್ ನರಿಂಗಾನ, ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ ಮೋರ್ಲಗುತ್ತು, ಪ್ರಧಾನ ಸಂಚಾಲಕ ಗಿರೀಶ್ ಆಳ್ವ ಮೋರ್ಲ, ಸಂಚಾಲಕ ಮುರಳೀಧರ ಶೆಟ್ಟಿ ಮೋರ್ಲ ಸಹಿತ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here