ಫೆ.10: ರೆಂಜಲಾಡಿಯಲ್ಲಿ ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮ-ಕೂಡುರಸ್ತೆಯಲ್ಲಿ ಸ್ವಾಗತ ಸಮಿತಿ ಸಭೆ, ಪೋಸ್ಟರ್ ಬಿಡುಗಡೆ

0

ಪುತ್ತೂರು: ರೆಂಜಲಾಡಿ ಇಸ್ಲಾಮಿಕ್ ಸೆಂಟರ್ ಇದರ ಆಶ್ರಯದಲ್ಲಿ ಫೆ.10ರಂದು ರೆಂಜಲಾಡಿಯಲ್ಲಿ ನಡೆಯಲಿರುವ ನೂರೇ ಅಜ್ಮೀರ್ ಆಧ್ಯಾತ್ಮಿಕ ಕಾರ್ಯಕ್ರಮದ ಸ್ವಾಗತ ಸಮಿತಿಯ ಸಭೆ ಹಾಗೂ ಪೋಸ್ಟರ್ ಬಿಡುಗಡೆ ಜ.18ರಂದು ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ.ಕೆ ಮಹಮ್ಮದ್ ಕೂಡುರಸ್ತೆ ಅವರ ನಿವಾಸದಲ್ಲಿ ನಡೆಯಿತು.


ಆರ್‌ಐಸಿ ಮುಖ್ಯಸ್ಥ ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಯಶಸ್ಸಿಗೆ ಸರ್ವರೂ ಸಹಕಾರ ನೀಡುವಂತೆ ಕೇಳಿಕೊಂಡರು.
ಕೂಡುರಸ್ತೆ ಮಸೀದಿಯ ಖತೀಬ್ ಬದ್ರುದ್ದೀನ್ ರಹ್ಮಾನಿ ದುವಾ ನೆರವೇರಿಸಿ ಬಳಿಕ ಸಭೆ ಉದ್ಘಾಟಿಸಿದರು. ಕೂಡುರಸ್ತೆ ಮಸೀದಿಯ ಅಧ್ಯಕ್ಷ ಮಜೀದ್ ಬಾಳಾಯ, ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ, ಅಬ್ಬಾಸ್ ಮುಸ್ಲಿಯಾರ್ ಕಟ್ಟತ್ತಡ್ಕ, ರೆಂಜಲಾಡಿ ಯಂಗ್‌ಮೆನ್ಸ್ ಅಧ್ಯಕ್ಷ ಯೂಸುಫ್ ರೆಂಜಲಾಡಿ ಮೊದಲಾದವರು ಮಾತನಾಡಿದರು. ರೆಂಜಲಾಡಿ, ಕೂಡುರಸ್ತೆ, ಕುಂಬ್ರ, ಸಾರೆಪುಣಿಯ ಹಲವಾರು ಮಂದಿ ಉಪಸ್ಥಿತರಿದ್ದರು.ಸ್ವಾಗತ ಸಮಿತಿ ಅಧ್ಯಕ್ಷ ಉಮ್ಮರ್ ಸುಲ್ತಾನ್ ರೆಂಜಲಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪಿ.ಕೆ ಮಹಮ್ಮದ್ ಕೂಡುರಸ್ತೆ ವಂದಿಸಿದರು.

LEAVE A REPLY

Please enter your comment!
Please enter your name here