ಜ.22: ಕಾವು ದೇವಸ್ಥಾನದ ಜಾತ್ರೋತ್ಸವದ ಬಗ್ಗೆ ಭಕ್ತಾದಿಗಳ ಸಭೆ

0

ಕಾವು: ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಾರ್ಚ್ ತಿಂಗಳಿನಲ್ಲಿ ನಡೆಯುವ ವರ್ಷಂಪ್ರತಿ ಜಾತ್ರೋತ್ಸವ ಕಾರ್ಯಕ್ರಮದ ಬಗ್ಗೆ ಜ.22ರಂದು ಅಪರಾಹ್ನ ಗಂಟೆ 3 ಕ್ಕೆ ಗ್ರಾಮದ ಭಕ್ತಾದಿಗಳ ಸಭೆ ಕರೆಯಲಾಗಿದೆ. ವರ್ಷಂಪ್ರತಿಯಂತೆ ವಾರ್ಷಿಕ ಕಾತ್ರೋತ್ಸವವನ್ನು ವಿಜೃಂಭಣೆಯಿಂದ ನಡೆಸುವ ಸಲುವಾಗಿ ಜಾತ್ರೋತ್ಸವ ಸಮಿತಿಯನ್ನು ರಚಿಸುವ ಸಲುವಾಗಿ ಗ್ರಾಮದ ಭಕ್ತಾದಿಗಳ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಶ್ರೀದೇವಳದ ಆಡಳಿತಾಧಿಕಾರಿ, ಪುತ್ತೂರು ಹೋಬಳಿಯ ಕಂದಾಯ ನಿರೀಕ್ಷಕರೂ ಆಗಿರುವ ಕೆ.ಟಿ ಗೋಪಾಲರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here