ಇಂದು ನಾಳೆ ಸವಣೂರಿನಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ 

0

ತೇಜಸ್ವಿ ಕಡಪಳ ,ಶ್ರುತಿ ಶೆಟ್ಟಿ ಸಬ್ರುಕಜೆ ಸಹಿತ ರಾಜ್ಯದ 32 ಜನರಿಗೆ ರಾಜ್ಯ ಯುವ ಪ್ರಶಸ್ತಿ ,ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ ಸಹಿತ ರಾಜ್ಯದ 3 ಸಂಸ್ಥೆಗಳಿಗೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ 

ಸವಣೂರು :  ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾ.ಪಂ. ಹಾಗೂ ಸವಣೂರು ಯುವಕ ಮಂಡಲದ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳ ಹಾಗೂ ರಾಜ್ಯದ 32 ಜನರಿಗೆ ,3 ಸಂಸ್ಥೆಗಳಿಗೆ ರಾಜ್ಯ ಯುವಜನ ಒಕ್ಕೂಟದ ಪ್ರಶಸ್ತಿ ಪ್ರದಾನ ಜ. 20 ಮತ್ತು 21ರಂದು ಸವಣೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ವೈಯಕ್ತಿಕ ವಿಭಾಗದಲ್ಲಿ ದ.ಕ.ದಿಂದ ಸುಳ್ಯದ ತೇಜಸ್ವಿ ಕಡಪಳ , ಶ್ರುತಿ ಶೆಟ್ಟಿ ಸಬ್ರುಕಜೆ ಸಹಿತ‌ 32 ಮಂದಿಗೆ ರಾಜ್ಯ ಯುವ ಪ್ರಶಸ್ತಿ ಹಾಗೂ ಸಾಂಘಿಕ  ಪ್ರಶಸ್ತಿಗೆ  ಭಾಗ್ಯೇಶ್ ರೈ  ನೇತೃತ್ವದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ ಸಹಿತ ರಾಜ್ಯದ 3 ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಜಿಲ್ಲಾ ಯುವಜನ‌ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here