ಕಸಾಪ ಕಡಬ ಹೋಬಳಿ ಅಧ್ಯಕ್ಷರಾಗಿ ಕೆ.ಪದ್ಮಪ್ಪ ಗೌಡ ರಾಮಕುಂಜ ನೇಮಕ

0

ರಾಮಕುಂಜ: ಕನ್ನಡ ಸಾಹಿತ್ಯ ಪರಿಷತ್ ಕಡಬ ಹೋಬಳಿ ಅಧ್ಯಕ್ಷರಾಗಿ ಕೆ.ಪದ್ಮಪ್ಪ ಗೌಡ ರಾಮಕುಂಜ ಅವರನ್ನು ನೇಮಕ ಮಾಡಲಾಗಿದೆ ಎಂದು ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೆ.ಸೇಸಪ್ಪ ರೈಯವರು ತಿಳಿಸಿದ್ದಾರೆ.


ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಕೆ.ಪದ್ಮಪ್ಪ ಗೌಡ ಅವರು ಸಾಹಿತ್ಯದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದಾರೆ. ಈ ಹಿಂದೆ ರಾಮಕುಂಜ ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿ.ಪ್ರಾ.ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನಲ್ಲಿ ನಡೆದ ಕಡಬ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆ.ಪದ್ಮಪ್ಪ ಗೌಡ ಅವರು ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು.

ದಿನದ ಕೆಲಹೊತ್ತು ಓದುವ ಹವ್ಯಾಸ ಬೆಳೆಸಿಕೊಂಡಿರುವ ಪದ್ಮಪ್ಪ ಗೌಡ ಅವರು ಕನ್ನಡದ ಖ್ಯಾತ ಬರಹಗಾರರ ಲೇಖನವನ್ನು ಒಳಗೊಂಡ ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹ ಮಾಡಿದ್ದಾರೆ. ಕನ್ನಡ ಸಾಹಿತ್ಯದ ಕುರಿತು ಕೆ.ಪದ್ಮಪ್ಪ ಗೌಡ ಅವರು ಹೊಂದಿದ್ದ ವಿಶೇಷ ಆಸಕ್ತಿ ಹಾಗೂ ಕನ್ನಡ ಬೆಳವಣಿಗೆಗೆ ಸಲ್ಲಿಸುತ್ತಿರುವ ಸೇವೆ ಪರಿಗಣಿಸಿ ಕಸಾಪ ಕಡಬ ತಾಲೂಕು ಕಡಬ ಹೋಬಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕೆ.ಸೇಸಪ್ಪ ರೈಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here