ಗಮನವನ್ನು ಬೇರೆಡೆ ಸೆಳೆದು ಚಿನ್ನದ ಸರ ಕಳವು-ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್‌ನಲ್ಲಿ ನಡೆದ ಘಟನೆ

0

ಪುತ್ತೂರು: ಪ್ರಯಾಣಿಕರೊಬ್ಬರ ಗಮನವನ್ನು ಬೇರೆಡೆ ಸೆಳೆದು ಅವರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕಳವು ಮಾಡಿದ ಘಟನೆ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್‌ನಲ್ಲಿ ನಡೆದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಪುತ್ತೂರು ಕಬಸ ನಿವಾಸಿ ಜಯರಾಮ ಭಟ್ ಪಿ ಅವರು ರೂ. 1,60,436 ಮೌಲ್ಯದ ಚಿನ್ನದ ಸರವನ್ನು ಕಳೆದು ಕೊಂಡವರು. ಅವರು ಮಂಗಳೂರಿನ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಜ.19ರಂದು ಚಿನ್ನದ ಸರವನ್ನು ಖರೀದಿಸಿ ಅದನ್ನು ಬ್ಯಾಗ್‌ನಲ್ಲಿ ಇರಿಸಿ ಪುತ್ತೂರಿಗೆ ಬರುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬರುತ್ತಿದ್ದ ವೇಳೆ ಬಸ್ ಮಂಗಳೂರು ಬಂಟ್ಸ್ ಹಾಸ್ಟೇಲ್ ತಲುಪಿದಾಗ ಪಕ್ಕದಲ್ಲಿ ಕುಳಿತ ಅಪರಿಚಿತ ಮಹಿಳೆ ಕೈಯಲ್ಲಿದ್ದ ಚಿಲ್ಲರೆ ಹಣವನ್ನು ಕೆಳಗಡೆ ಬೀಳಿಸಿ ಅವರ ಗಮನವನ್ನು ಬೇರೆಡೆಗೆ ಸೆಳೆದಿದ್ದಲ್ಲದೆ ಅಪರಿಚಿತ ಮಹಿಳೆ ಮಗುವಿನ ಜೊತೆ ಅವರ ಬ್ಯಾಗ್‌ನ ಮೇಲೆ ಬಿದಿದ್ದಾರೆ. ಬಳಿಕ ಮಹಿಳೆ ಇನ್ನೋರ್ವ ಮಹಿಳೆಯೊಂದಿಗೆ ಜ್ಯೋತಿ ಸರ್ಕಲ್‌ನಲ್ಲಿ ಇಳಿದು ಹೋಗಿದ್ದಾರೆ. ಜಯರಾಮ್ ಭಟ್ ಅವರು ಮನೆಗೆ ತಲುಪಿದ ಬಳಿಕ ಬ್ಯಾಗ್ ನೋಡಿದಾಗ ಚಿನ್ನದ ಸರವಿದ್ದ ಬಾಕ್ಸ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಅವರು ಪುತ್ತೂರು ಪೊಲೀಸರಿಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here