ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ಜಿಲ್ಲಾ ಸಾಂಘಿಕ ಯುವ ಪ್ರಶಸ್ತಿ ಪ್ರದಾನ

0

ಪುತ್ತೂರು: ಶ್ರಮ, ಸೇವೆ, ಸಹಾಯ ಎಂಬ ಧ್ಯೇಯದೊಂದಿಗೆ ಸಾಮಾಜಿಕ ಸೇವೆ ಮಾಡುತ್ತಿರುವ ಅರಿಯಡ್ಕ ಗ್ರಾಮದ ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ 2024 ನೇ ಸಾಲಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಲ್ಪಡುವ ಜಿಲ್ಲಾ ಯುವ ಸಾಂಘಿಕ ಪ್ರಶಸ್ತಿ ಲಭಿಸಿದೆ. ಸವಣೂರಿನಲ್ಲಿ ನಡೆಯುತ್ತಿರುವ ಯುವಜನ ಮೇಳದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಪ್ರಶಸ್ತಿ ಪ್ರದಾನ ಮಾಡಿದರು. ಯುವಶಕ್ತಿ ಬಳಗದ ಸಂಘಟನಾ ಕಾರ್ಯದರ್ಶಿ ರಾಜೇಶ್ ಮಯೂರ ಹಾಗೂ ಸಂಘಟನೆಯ ಸದಸ್ಯರುಗಳು ಪ್ರಶಸ್ತಿ ಸ್ವೀಕರಿಸಿದರು.

ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ಈ ಮೊದಲು ಸ್ವಚ್ಛಭಾರತ್ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿಯು ಲಭಿಸಿದ್ದು ಇದೀಗ ಎರಡನೇ ಬಾರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಸಂಘಟನೆ ತಮ್ಮದಾಗಿಸಿಕೊಂಡಿದೆ. ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಗುರುತಿಸಿಕೊಂಡಿರುವ ಶ್ರೀ ವಿಷ್ಣು ಯುವಶಕ್ತಿ ಬಳಗವು ತಾಲೂಕಿನಲ್ಲೇ ಉತ್ತಮ ಸಂಘಟನೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here