ನರಿಮೊಗರು: ರಸ್ತೆ ಕಾಮಗಾರಿ ವಿಳಂಬ ಆರೋಪ-ಶಾಸಕರಿಗೆ ದೂರು

0

ಕೂಡಲೇ ಕಾಮಗಾರಿ ಪೂರ್ತಿಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ ಅಶೋಕ್ ರೈ

ಪುತ್ತೂರು: ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪುರುಷರಕಟ್ಟೆಯಿಂದ ಪಾಪೆತ್ತಡ್ಕ ವರೆಗೆ ರಸ್ತೆ ಕಾಮಗಾರಿ ಇತ್ತೀಚೆಗೆ ಪ್ರಾರಂಭಗೊಂಡಿದ್ದು ಅದು ಕೆಲ ದಿನಗಳಿಂದ ಕಾಮಗಾರಿ ಸ್ಥಗಿತಗೊಂಡಿತ್ತಲ್ಲದೇ ಅರ್ದಂಬರ್ಧ ಕಾಮಗಾರಿಯಿಂದ ವಿದ್ಯಾರ್ಥಿಗಳಿಗೆ, ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗಿತ್ತು. ಈ ಬಗ್ಗೆ ಸ್ಥಳೀಯ ಕಾಂಗ್ರೆಸ್ ಎಸ್.ಟಿ ಘಟಕದ ತಾಲೂಕು ಅಧ್ಯಕ್ಷರಾದ ಮಹಾಲಿಂಗ ನಾಯ್ಕ ನರಿಮೊಗರು ಮತ್ತು ಕಾಂಗ್ರೆಸ್ ಮುಖಂಡ ಪ್ರವೀಣ್ ಆಚಾರ್ಯ ನರಿಮೊಗರು ಅವರು ಜ.20ರಂದು ಶಾಸಕ ಅಶೋಕ್ ಕುಮಾರ್ ರೈ ಅವರ ಗಮನಕ್ಕೆ ತಂದಿದ್ದು ಈ ವೇಳೆ ತಕ್ಷಣವೇ ಕಾರ್ಯಪ್ರವೃತ್ತರಾದ ಶಾಸಕರು ಗುತ್ತಿಗೆದಾರರಿಗೆ ಕರೆ ಮಾಡಿ ತಕ್ಷಣವೇ ಕಾಮಗಾರಿಯನ್ನು ಮುಂದುವರಿಸಿ ಆದಷ್ಟು ಬೇಗ ಕಾಮಗಾರಿ ಪೂರ್ತಿಗೊಳಿಸುವಂತೆ ಸೂಚನೆ ನೀಡಿದರು. ಶಾಸಕರ ಸಕಾಲಿಕ ಸ್ಪಂದನೆಗೆ ಮಹಾಲಿಂಗ ನಾಯ್ಕ ಮತ್ತು ಪ್ರವೀಣ್ ಆಚಾರ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here