ಕಾಪಿನಬಾಗಿಲು: ಕೃಷಿ ತೋಟಕ್ಕೆ ಕಾಡಾನೆ ದಾಳಿ-ಅಡಿಕೆ, ಬಾಳೆ ಕೃಷಿ ನಾಶ

0

ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಸಮೀಪದ ವಡ್ರಳಿಕೆ ಎಂಬಲ್ಲಿ ಜ.18ರ ರಾತ್ರಿ ಕಾಡಾನೆ ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ.
ರಫಾಯಲ್ ಸ್ಟ್ರೆಲ್ಲಾ ಎಂಬವರ ತೋಟಕ್ಕೆ ದಾಳಿ ಮಾಡಿದ ಕಾಡಾನೆ ಅಡಿಕೆ, ಬಾಳೆ ಕೃಷಿಯನ್ನು ಧ್ವಂಸ ಮಾಡಿದ್ದು, ಇದರಿಂದಾಗಿ ಕೃಷಿಕರಿಗೆ ಅಪಾರ ನಷ್ಟ ಉಂಟಾಗಿದೆ.
ಪದೇ ಪದೇ ಈ ರೀತಿಯ ದಾಳಿಯಿಂದ ಕೃಷಿಕರಿಗೆ ತೊಂದರೆ ಉಂಟಾಗಿದೆ. ಸಂಬಂಧಪಟ್ಟ ಇಲಾಖೆಯವರು ಪರಿಶೀಲಿಸಿ, ಕೃಷಿ ನಷ್ಟದ ಬಗ್ಗೆ ಸರ್ಕಾರದಿಂದ ಸಿಗುವ ಪರಿಹಾರ ದೊರಕಿಸಿಕೊಡುವಲ್ಲಿ ಹಾಗೂ ಆನೆ ದಾಳಿ ತಡೆಯುವ ನಿಟ್ಟಿನಲ್ಲಿ ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here