ಜ.22: ತಿಪ್ಪಕೋಡಿಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

0

ಪುತ್ತೂರು : ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ತಿಪ್ಪಕೋಡಿ ಬಾಲಕೃಷ್ಣ ಮಹಾಬಲ ರೈ ಇವರ ಮನೆಯಂಗಳದಲ್ಲಿ ಜ.22 ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ 27ನೆಯ ವರುಷದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ನಡೆಯಲಿದೆ.

ಅಪರಾಹ್ನ 3.30 ರಿಂದ ಶ್ರೀ ಉಮಾಮಹೇಶ್ವರ ಭಜನಾ ಮಂದಿರ, ಉದಯಗಿರಿ ಹಿರೇಬಂಡಾಡಿ ತಂಡದಿಂದ ಕುಣಿತ ಭಜನೆ, ರಾತ್ರಿ 8 ರಿಂದ ಶ್ರೀದೇವಿಯ ಪ್ರಸಾದವಾಗಿ ಅನ್ನಸಂತರ್ಪಣೆ ನಡೆಯಲಿದೆ. ತಾವೆಲ್ಲರೂ ಆಗಮಿಸಿ ಪ್ರಸಾದ ಸ್ವೀಕರಿಸಿ ಶ್ರೀದೇವಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ತಿಪ್ಪಕೋಡಿ ಬಾಲಕೃಷ್ಣ ಮಹಾಬಲ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here