ಕೋಡಿಂಬಾಡಿ: ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆಯು ವಿಶ್ವ ಶಾಂತಿ ನೆಮ್ಮದಿಯನ್ನು ಎಲ್ಲೆಡೆ ಕರುಣಿಸಲಿ: ಶಾಸಕ ಅಶೋಕ್ ರೈ ಅವರಿಂದ ವಿಶೇಷ ಪ್ರಾರ್ಥನೆ

0

ಕೋಡಿಂಬಾಡಿ: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕೋಡಿಂಬಾಡಿ ಗ್ರಾಮಸ್ಥರ ಹಾಗೂ ಪುತ್ತೂರಿನ ಸಮಸ್ತ ನಾಗರಿಕರ ಪರವಾಗಿ ತನ್ನ ಸ್ವಗ್ರಾಮ ಕೋಡಿಂಬಾಡಿ ಮಠಂತಬೆಟ್ಟು‌ಶ್ರೀ ಮಹಿಷ‌ಮರ್ಧಿನಿ ದೇವಿಗೆ ಪುಷ್ಪವನ್ನು ಸಮರ್ಪಿಸುತ್ತಾ ರಾಜ್ಯ, ದೇಶ ಮತ್ತು ವಿಶ್ವಕ್ಕೆ ಸನ್ಮಂಗಳವನ್ನು ಉಂಟು ಮಾಡಲಿ ಎಂದು ಪ್ರಾರ್ಥಿಸಿದರು. ಈ ದೇಶದಲ್ಲಿ ಎಲ್ಲಾ ಧರ್ಮಿಯರು ಪರಸ್ಪರ ಸಹೋದರತೆಯಿಂದ ಬಾಳ್ವೆ ನಡೆಸುವ ಮೂಲಕ ದೇಶ, ಜಗತ್ತಿನಲ್ಲಿ‌ ಶಾಂತಿ ನೆಲಸುವಂತಾಗಲಿ‌ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿರಂಜನ್ ರೈ ಮಠಂತಬೆಟ್ಡು, ಮುರಳೀಧರ್ ರೈ ಮಠಂತಬೆಟ್ಟು, ಯೋಗೀಶ್ ಸಾಮಾನಿ, ನಿಹಾಲ್ ಶೆಟ್ಟಿ ಕಲ್ಲಾರೆ, ದೇವಸ್ಥಾನದ ವ್ಯವಸ್ಥಾಪಕ ಸಂತೋಷ್ ರೈ, ವಾರಿಸೇನ ಜೈನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here